ನ್ಯಾಯಾಧೀಶೆ ಎಂ.ಎಸ್.ಶಶಿಕಲಾ ಅಭಿಪ್ರಾಯ/ ಹಾಸ್ಟೆಲ್ ಭೇಟಿ, ಪರಿಶೀಲನೆ
ಪ್ರತಿನಿಧಿ ವರದಿ ಬೇಲೂರು
ಜೆಎಂಎಫ್ಸಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಎಂ.ಎಸ್.ಶಶಿಕಲಾ ಪಟ್ಟಣದ ಬಿಸಿಎಂ ವಿದ್ಯಾರ್ಥಿ ವಸತಿನಿಲಯಕ್ಕೆ ದಿಡೀರ್ ಭೇಟಿ ನೀಡುವ ಮೂಲಕ ಅಲ್ಲಿನ ಅಡಿಗೆ ಕೋಣೆ, ದಾಸ್ತಾನು ಕೊಠಡಿ, ಸ್ವಚ್ಛತೆ ಮತ್ತು ವಿದ್ಯಾರ್ಥಿಗಳ ಯೋಗಕ್ಷೇಮವನ್ನು ವಿಚಾರಿಸಿಲ್ಲದೆ ಸರ್ಕಾರ ನೀಡುವ ಸವಲತ್ತುಗಳನ್ನು ಮಕ್ಕಳಿಗೆ ಸದ್ಬಳಕೆ ಮಾಡಿಕೊಳ್ಳುವಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.
ಪಟ್ಟಣದ ಜೆಪಿ ನಗರದ ವಿದ್ಯಾರ್ಥಿ ವಸತಿನಿಲಯಕ್ಕೆ ಭೇಟಿ ನೀಡಿದ ನ್ಯಾಯಾಧೀಶೆ ಎಂ.ಎಸ್.ಶಶಿಕಲಾ, ನೇರ ಅಡುಗೆ ಕೋಣೆಗೆ ಭೇಟಿ ನೀಡಿ ಸಿದ್ದಪಡಿಸಿದ ಆಹಾರ ಪದಾರ್ಥಗಳನ್ನು ಸ್ವತಃ ಸೇವೆನೆ ಮಾಡುವ ಮೂಲಕ ಪರಿಶೀಲನೆ ನಡೆಸಿದರು. ಬಳಿಕ ಆಹಾರ ಪದಾರ್ಥಗಳು ಮತ್ತು ತರಕಾರಿಗಳ ಕೊಠಡಿಗಳನ್ನು ವೀಕ್ಷಿಸಿದರು. ಅಡುಗೆ ಕೋಣೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕಿದೆ. ಹಾಗೆಯೇ ಶುಚಿ, ರುಚಿ, ಯುಕ್ತ ಆಹಾರವನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ಇಲಾಖೆ ನಿಗಧಿಪಡಿಸಿದ ವೇಳಾಪಟ್ಟಿಯಂತೆ ವಾರದಲ್ಲಿ ವಿವಿಧ ಆಹಾರವನ್ನು ಒದಗಿಸಬೇಕಿದೆ. ವಿದ್ಯಾರ್ಥಿಗಳನ್ನು ಸೌಲನ್ಯದಿಂದ ಕಾಣುವ ಮೂಲಕ ಅವರಲ್ಲಿ ವಿಶ್ವಾಸವನ್ನು ಬೆಳೆಸಿಕೊಂಡರೆ ಮಾತ್ರ ವಿದ್ಯಾರ್ಥಿಗಳು ನಿಮಗೂ ಗೌರವ ನೀಡುತ್ತಾರೆ. ಈ ನಿಟ್ಟಿನಲ್ಲಿ ವಾರ್ಡ್ ಗಳ ಗಮನ ಹರಿಸಬೇಕಿದೆ. ವಿಶೇಷವಾಗಿ ಆಹಾರ ಪದಾರ್ಥಗಳು ಗುಣಮಟ್ಟದಿಂದ ಕೂಡಿರಬೇಕು. ಒಂದು ವೇಳೆ ಬೇಕಾಬಿಟ್ಟಿ ನೀಡುವುದು ಕಂಡುಬಂದರೆ ಉನ್ನತ ಅಧಿಕಾರಿಗಳು ಇಲ್ಲವೇ ನಮಗೂ ತಿಳಿಸಬಹುದು. ಸರ್ಕಾರ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ವೆಚ್ಚ ಮಾಡುತ್ತಿರುವ ಹಣ ಸದ್ಬಳಕೆಯಾಗುವ ಮೂಲಕ ಭಾರತ ದೇಶಕ್ಕೆ ಕೊಡುಗೆ ನೀಡಲು ಮುಂದಾಗಿ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬೇಲೂರು ಅವರು, ಶಿಕ್ಷಣದಿಂದ ಮಾತ್ರ ಸಮಗ್ರ ದೇಶ ಅಭಿವೃದ್ಧಿ ಎಂಬ ಹಿನ್ನೆಲೆಯಲ್ಲಿ ಸರ್ಕಾರ ಪ್ರತಿಯೊಬ್ಬರಿಗೂ ವಿದ್ಯಾವಂತರಾಗುವ ನಿಟ್ಟಿನಲ್ಲಿ ಉದ್ಯೋಗ ಇಲ್ಲವೇ ಉದ್ಯೋಗದ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಕೆಲಸ ಮಾಡುತ್ತಿದೆ. ನಿಮ್ಮ ಪೋಷಕರು ಕೂಲಿ ಅಥವಾ ಇನ್ನಿತರ ಕೆಲಸಗಳನ್ನು ಮಾಡುತ್ತಾ ನಿಮ್ಮ ಭವಿಷ್ಯ ರೂಪಿಸಲು ಹರ ಸಾಹಸ ಪಡುತ್ತಿದ್ದಾರೆ. ಅವರ ಶ್ರಮ ಎಂದಿಗೂ ವ್ಯರ್ಥ್ಯವಾಗಂತೆ ವಿದ್ಯಾರ್ಥಿಗಳು ಕೇವಲ ಓದಿಗೆ ಮಾತ್ರ ಗಮನ ನೀಡಬೇಕಿದೆ. ಪಠ್ಯದ ಜತೆಯಲ್ಲಿ ಸಾಮಾನ್ಯ ಜ್ಞಾನವನ್ನು ತಾವುಗಳು ಗಳಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಸಂದರ್ಭದಲ್ಲಿ ಕೆಲಲೋಪಗಳನ್ನು ಸದ್ಯ ವಾರ್ಡನ್ ಅವರಿಗೆ ತಿಳಿಸಿ ಸರಿಪಡಿಸಲು ಸೂಚನೆ ನೀಡಲಾಗಿದೆ. ಅಡುಗೆ ತಯಾರಿಸುವ ಸಿಬ್ಬಂದಿಗಳು ಹೆಚ್ಚು ಸ್ವಚ್ಛತೆಗೆ ಒತ್ತು ನೀಡಬೇಕು. ಶುಚಿ, ರುಚಿ, ಯುಕ್ತ ಆಹಾರವನ್ನು ವಿದ್ಯಾರ್ಥಿಗಳಿಗೆ ಇಲಾಖೆ ಮಾರ್ಗದರ್ಶಿ ನೀಡಲು ತಿಳಿಸಲಾಗಿದೆ ಎಂದರು.
ವಾರ್ಡನ್ ವೀಣಾ, ಎಎಸ್ಐ ಚಂದ್ರು, ಅಮಲ್ದಾರ್ ಪ್ರಕಾಶ್, ಗಿರಿಯಪ್ಪ ಇನ್ನು ಮುಂತಾದವರು ಹಾಜರಿದ್ದರು.