ಚಿಕ್ಕಮಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-3ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಯುತ್ತಿದ್ದು, ಆ.12 ರಿಂದ ಪರೀಕ್ಷೆ ಮೌಲ್ಯಮಾಪನ ಕಾರ್ಯ ಮುಕ್ತಾಯಗೊಳ್ಳುವವರೆಗೆ ಜಿಲ್ಲೆಯ ಒಟ್ಟು 3 ಮೌಲ್ಯಮಾಪನ ಕೇಂದ್ರಗಳಾದ ಚರ್ಚ್ ರಸ್ತೆ, ಸಂತ ಜೋಸೆಫ್ ಬಾಲಿಕಾ ಪ್ರೌಢಶಾಲೆ, ದಂಟರಮಕ್ಕಿ, ಸಂತ ಜೋಸೆಫ್ರ ಬಾಲಕರ ಪ್ರೌಢಶಾಲೆ ಮತ್ತು ಮಲ್ಲಂದೂರು ರಸ್ತೆ ವಾಸವಿ ಪ್ರೌಢಶಾಲೆಗಳ ಸುತ್ತ ಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಸ್ಕಾಂ ಜನಸಂಪರ್ಕ ಸಭೆ:
ಚಿಕ್ಕಮಗಳೂರು: ಮೆಸ್ಕಾಂ ಆಲ್ದೂರು ಉಪವಿಭಾಗ ಕಚೇರಿಯಲ್ಲಿ ಆ.13 ರಂದು ಬೆಳಗ್ಗೆ 10.30 ರಿಂದ 12 ಗಂಟೆ ವರೆಗೆ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.
ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂನ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳೆ ಸಮೀಕ್ಷೆ ಆಪ್:
ಚಿಕ್ಕಮಗಳೂರು: ತೋಟಗಾರಿಕೆ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿಗೆ ರೈತರ ಬೆಳೆ ಸಮೀಕ್ಷೆ ಆಪ್ ಅನ್ನು ಸರ್ಕಾರ ಈಗಾಗಲೇ ಬಿಡುಗಡೆಗೊಳಿಸಿದ್ದು, ರೈತರು ಸ್ವತಃ ತಾವುಗಳು ಬೆಳೆ ಸರ್ವೇ ಕೈಗೊಂಡು ಬೆಳೆ ಸಮೀಕ್ಷೆ ವರದಿಯನ್ನು ಬೆಳೆ ವಿಮೆ ಪರಿಹಾರ ಇತ್ಯರ್ಥಪಡಿಸಿಕೊಳ್ಳಲು https://play.google.com/store/apps/details?=com.csk.farmer23_24.cropsurvey (ಪ್ಲೇಸ್ಟೋರ್ನಲ್ಲಿ ಲಭ್ಯವಿದೆ) ಈ ಲಿಂಕ್ ಬಳಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಸಬಾ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಕೆ.ಎಲ್.ಅರುಣ್ ಕುಮಾರ್ ಮೊ.ಸಂ.9108948434, ಅಂಬಳೆ ಹೋಬಳಿ, ಸಹಾಯಕ ತೋಟಗಾರಿಕೆ ಅಧಿಕಾರಿ ಎಸ್.ಗುರುರಾಜ್ ಮೊ.ಸಂ.7892338384, ವಸ್ತಾರೆ ಹೋಬಳಿ ಮತ್ತು ಆಲ್ದೂರು ಹೋಬಳಿ, ಸಹಾಯಕ ತೋಟಗಾರಿಕೆ ಅಧಿಕಾರಿ ಎಚ್.ಆರ್.ಅಕ್ಷಯ್ ಮೊ.ಸಂ.8951253441, ಜಾಗರ ಮತ್ತು ಆವತಿ ಹೋಬಳಿ, ಸಹಾಯಕ ತೋಟಗಾರಿಕೆ ಅಧಿಕಾರಿ ಎಚ್.ಎ.ನಟೇಶ್ ಕಮಾರ್ ಮೊ.ಸಂ.7899048055, ಲಕ್ಯಾ ಹೋಬಳಿ, ಸಹಾಯಕ ತೋಟಗಾರಿಕೆ ಅಧಿಕಾರಿ ವಿ.ಎ.ಅರುಣ್ ಮೊ.ಸಂ.8277038990, ಖಾಂಡ್ಯ ಹೋಬಳಿ, ಸಹಾಯಕ ತೋಟಗಾರಿಕೆ ಅಧಿಕಾರಿ ಎಚ್.ಆರ್.ಯೋಗೀಶ್ ಮೊ.ಸಂ.9353231992, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಚಿಕ್ಕಮಗಳೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ:
ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ ಚಿಕ್ಕಮಗಳೂರು ಪ್ರಾದೇಶಿಕ ಕೇಂದ್ರದಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ವರ್ಷದ ಸ್ನಾತಕ, ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಎಂ.ಎಸ್.ಡಬ್ಲೂ, ಬಿ.ಲಿಬ್.ಐ.ಸಿ, ಎಂ.ಎಲ್.ಐ.ಸಿ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ ಹಾಗೂ ಡಿಪ್ಲೊಮೋ ಸರ್ಟಿಫಿಕೇಟ್ ಮುಂತಾದ ಕೋರ್ಸ್ ಗಳ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು ಕೆ.ಪಿ.ಗುರುದತ್ ಮೊ.ಸಂ.80887 16236, 9449396155 ಇವರನ್ನು ಸಂಪರ್ಕಿಸಬಹುದೆಂದು ಕರಾಮುವಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.