ಕಳೆದ 2 ತಿಂಗಳಿಂದ ಡಿ ಬಾಸ್ ದರ್ಶನ್ & ಗ್ಯಾಂಗ್ ಪರಪ್ಪನ ಅಗ್ರಹಾರದಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಡಿ ಬಾಸ್ ದರ್ಶನ್ ಈ ಕೇಸ್ ನಲ್ಲಿ ಸಖತ್ ಟೈಟ್ ಆಗಿಯೇ ಫಿಟ್ ಆಗ್ತಿದ್ದಾರೆ. ಅನೇಕ ಸಾಕ್ಷ್ಯಗಳು ಮೇಲ್ನೋಟಕ್ಕೆ ದರ್ಶನ್ ಅಪರಾಧ ಎಸಗಿರೋದು ದೃಢ ಎಂಬಂತೆ ಗೋಚರಿಸುತ್ತಿದೆ.
ದರ್ಶನ್ ವಿರುದ್ಧ ದಿನಕ್ಕೊಂದು ಸಾಕ್ಷಿಗಳನ್ನು ಕಲೆ ಹಾಕುತ್ತಿರುವ ಪೋಲಿಸರು, ದರ್ಶನ್ ಬಟ್ಟೆಗಳ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಸಿಕ್ಕಿವೆ ಎಂದು ಹೇಳಿದ್ದರು. ಇದೀಗ ಸ್ಪೋಟಕ ಮಾಹಿತಿಯೊಂದು ಹೊರ ಬಂದಿದ್ದು, ದರ್ಶನ್ ಅಂಡ್ ಟೀಂ ವಿರುದ್ಧವಾಗಿ ಮತ್ತೆರೆಡು ಸಾಕ್ಷಿ ಸಿಕ್ಕಿವೆ ಎಂದಿದ್ದಾರೆ. ಮರ್ಡರ್ ಕೇಸ್ ನಲ್ಲಿ
ಬಗೆದಷ್ಟು ಸಾಕ್ಷಿ ದೊರಕುತ್ತಿದ್ದು, ಆರೋಪಿ ಪವಿತ್ರಾಗೌಡಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿಯ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ ಎಂದು ವರದಿಯಾಗಿದೆ. ಅಲ್ಲದೆ ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ ಎನ್ನಲಾಗಿದೆ.ಪವಿತ್ರಾಗೌಡ ಮನೆಯಲ್ಲಿ ಆಕೆ ಕೊಲೆ ದಿನ ಆಕೆ ಧರಿಸಿದ್ದ ಚಪ್ಪಲಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಅದನ್ನು ಎಫ್ಎಸ್ಎಲ್ಗೆ ಕಳುಹಿಸಲಾಗಿತ್ತು. ಚಪ್ಪಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಇರುವುದು ಪತ್ತೆಯಾಗಿದೆ.ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ಬಳಿಕ ಆರೋಪಿಗಳು ಅಲ್ಲೇ ಪಾರ್ಟಿ ಮಾಡಿ ಕುಷ್ಕ ತಿಂದಿದ್ದರು. ಇದರಲ್ಲಿ ಒಂದು ಬಿಯರ್ ಬಾಟಲಿ ಮೇಲೆ ರಕ್ತದ ಕಲೆ ಪತ್ತೆಯಾಗಿದೆ. ಆರೋಪಿಯೊಬ್ಬನ ಫಿಂಗರ್ ಪ್ರಿಂಟ್ ಕೂಡ ಇದ್ದು, ತನಿಖೆ ನಡೆಯುತ್ತಿದೆ. ಸದ್ಯ ಬಿಯರ್ ಬಾಟಲಿಯನ್ನು ಪ್ರಮುಖ ಸಾಕ್ಷಿಯಾಗಿ ಮಾಡಿರುವ ಪೊಲೀಸರು, ಇನ್ನೂ ಹೆಚ್ಚಿನ ಸಾಕ್ಷಿಗಳ ಹುಡುಕಾಟದಲ್ಲಿದ್ದಾರೆ.
ಕೊಲೆ ಪ್ರಕರಣ ಸಂಬಂಧ ದರ್ಶನ್ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆಯನ್ನು ನ್ಯಾಯಾಲಯದಲ್ಲಿ CRPC 164ರಡಿ ಪೊಲೀಸರು ದಾಖಲಿಸಿದ್ದಾರೆ. ಹತ್ಯೆಗೂ ಮುನ್ನ ದರ್ಶನ್ ಜೊತೆ ಭೋಜನ ಕೂಟದಲ್ಲಿದ್ದ ಕಾರಣಕ್ಕೆ ನಟ ಯಶಸ್ ಹಾಗೂ ಚಿಕ್ಕಣ್ಣ ಅವರನ್ನು ಸಾಕ್ಷಿಯಾಗಿ ಪರಿಗಣಿಸಿ ಪೊಲೀಸರು ಹೇಳಿಕೆ ಪಡೆದಿದ್ದಾರೆ.