ಸಿದ್ದರಾಮಯ್ಯ ಜೈಲಿನಲ್ಲೇ ಕುಳಿತು ಕೇಜ್ರಿವಾಲ್ ರೀತಿ ಆಡಳಿತ ಮಾಡುತ್ತಾರೆ ಎಂಬ ಬಿಜೆಪಿ ಶಾಸಕ ಶ್ರೀವತ್ಸ ಹೇಳಿಕೆಗೆ ಸಿಎಂ ಆಪ್ತ ಎಂ ಕೆ ಸೋಮಶೇಖರ್ ತಿರುಗೇಟು ನೀಡಿದ್ದಾರೆ.
ಮೈಸೂರಲ್ಲಿ ಮಾತಾಡಿದ ಅವ್ರು ,ಶ್ರೀವತ್ಸ ಒಬ್ಬ ಅಚಾನಕ್ ಶಾಸಕ.ಇವರ ಹೇಳಿಕೆ ಅಕ್ಷಮ್ಯ ಹಾಗೂ ಬಾಲಿಷವಾಗಿದೆ.
ಸಿಎಂ ಸಿದ್ದರಾಮಯ್ಯ ಒಬ್ಬ ಪ್ರಾಮಾಣಿಕ ಮುಖ್ಯಮಂತ್ರಿ. ಸಿಎಂ ಬಳಿ ಮೈಸೂರಿನಲ್ಲಿ ಒಂದು ಸ್ವಂತ ಮನೆ ಇಲ್ಲ.ಬಿಜೆಪಿಯಲ್ಲಿರುವ ಶಾಸಕ, ಸಂಸದರ ಮೇಲೆ ತನಿಖೆ ಮಾಡಿದರೆ ನೂರಕ್ಕೆ 95 ರಷ್ಟು ಭ್ರಷ್ಟರೇ ಇದ್ದಾರೆ.ಇವರ ಮಾತನ್ನು ಈ ಕೂಡಲೇ ವಾಪಸ್ ಪಡೆಯಬೇಕು.ಇವರು ಮಾಡುವ ಕೆಲಸವನ್ನು ಬಿಟ್ಟು ಬೇಜವಬ್ದಾರಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಶಾಸಕ ಶ್ರೀವತ್ಸ ವಿರುದ್ಧ ಮಾಜಿ ಶಾಸಕ ಎಂ ಕೆ ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ.