ಜಿಂಕೆ ಚರ್ಮ ಮಾರಾಟಕ್ಕೆ ಯತ್ನಿಸಿದ ಆರೋಪಿಯನ್ನಬೈಲುಕುಪ್ಪೆ ಪೊಲೀಸರು ಬಂಧಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹೊನ್ನೂರು ಗ್ರಾಮದ ಪುನೀತ್(25) ಬಂಧಿತ ಆರೋಪಿ.
ಬೈಲಕುಪ್ಪೆ ಪೆಟ್ರೋಲ್ ಬಂಕ್ ಬಳಿ ಘಟನೆ ಜರುಗಿದೆ. ಪೆಟ್ರೋಲ್ ಬಂಕ್ ಬಳಿ ಜಿಂಕೆ ಚರ್ಮವನ್ನ ಗೋಣಿಚೀಲದಲ್ಲಿ ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ ಪುನೀತ್ನನ್ನು ಖಚಿತ ಮಾಹಿತಿ ಆಧರಿಸಿದ ದಾಳಿ ನಡೆಸಿದ ಪೋಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಬೈಲಕುಪ್ಪೆ ಎಸ್ ಐ ಅಜಯ್ ಕುಮಾರ್, ಸಿಬ್ಬಂದಿಗಳಾದ ಮುದ್ದುರಾಜು, ಮಹದೇವಪ್ಪ, ಸುರೇಶ್, ಚೇತನ್, ಮಹೇಶ್ ಭಾಗಿಯಾಗಿದ್ದರು.