ಮೈಸೂರು: ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ, ಕೊಲೆಗೈದಿರುವುದನ್ನು ಖಂಡಿಸಿ ರಾಷ್ಟ್ರದಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತದೆ. ಐಎಂಎ(Indian Medical Association) ನೇತೃತ್ವದಲ್ಲಿಂದು ದೇಶದಾದ್ಯಂತ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಮುಷ್ಕರಕ್ಕೆ ಕರೆ ನೀಡಿಲಾಗಿದೆ. ಕಲ್ಕತ್ತಾ ಘಟನೆಯನ್ನು ಖಂಡಿಸಿಮೈಸೂರಿನಲ್ಲಿಯೂ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.
ಮೈಸೂರಿನಲ್ಲೂ ಮುಷ್ಕರಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ವೈದ್ಯಕೀಯ ಸೇವೆ ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿರುವ ವೈದ್ಯರು, ತುರ್ತು ಆರೋಗ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ವೈದ್ಯಕೀಯ ಸೇವೆಗಳನ್ನ ಬಂದ್ ಮಾಡಿ ಪ್ರತಿಭಟನೆಗೆ ಇಳಿದಿದ್ದಾರೆ. ಹೊರ ರೋಗಿಗಳ ವಿಭಾಗದ ಕರ್ತವ್ಯ ಬಹಿಷ್ಕರಿಸಿರುವ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಕಲ್ಕತ್ತಾ ಘಟನೆ ವಿರುದ್ದ ಧಿಕ್ಕಾರವನ್ನ ಕೂಗಿ ಘಟನೆಗೆ ನ್ಯಾಯ ಒದಗಿಸುವಂತೆ ಆಕ್ರೋಶವನ್ನ ಹೊರ ಹಾಕಿದ್ದಾರೆ.