ಕಾರ್ಮಿಕ ನಿರೀಕ್ಷಕ ಎಚ್.ಕೆ.ಗೋವಿಂದರಾಜು ಅಭಿಪ್ರಾಯ
ಪ್ರತಿನಿಧಿ ವರದಿ ಕೆ.ಆರ್.ನಗರ
ಸ್ವಾತಂತ್ರ್ಯ ಭಾರತದಲ್ಲಿ ಜೀವಿಸುತ್ತಿರುವ ನಾವು ನಮಗೆ ಸ್ವಾತಂತ್ರ್ಯ ಕೊಡಿಸಲು ಹೋರಾಟ ಮಾಡಿದ ಮಹನೀಯರನ್ನು ನೆನೆಯುವ ಮೂಲಕ ಗೌರವ ಸಲ್ಲಿಸೋಣ ಎಂದು ಕಾರ್ಮಿಕ ನಿರೀಕ್ಷಕ ಎಚ್.ಕೆ.ಗೋವಿಂದರಾಜು ಹೇಳಿದರು.
ಪಟ್ಟಣದ ೭ನೇ ರಸ್ತೆಯಲ್ಲಿರುವ ಕಾರ್ಮಿಕರ ಇಲಾಖೆಯ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ೭೮ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಮಹಾತ್ಮಗಾಂಧಿ, ಸುಭಾಷ್ ಚಂದ್ರ ಬೋಸ್, ಡಾ.ಬಿ.ಆರ್.ಅಂಬೇಡ್ಕರ್, ವಲ್ಲಭಾಯಿ ಪಟೇಲ್, ಭಗತ್ ಸಿಂಗ್ ಸೇರಿದಂತೆ ಅನೇಕ ಮಹಾನೀಯರ ಹೋರಾಟ ಮತ್ತು ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದಕ್ಕಿದ್ದು ಇದರಿಂದ ನಾವೆಲ್ಲ ನೆಮ್ಮದಿಯಿಂದ ಬದುಕು ನಡೆಸುತ್ತಿದ್ದೇ ಎಂದರು.
ನಮ್ಮ ಇಲಾಖೆಯಲ್ಲಿ ನೊಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರಿಗಾಗಿ ಸರ್ಕಾರದ ವತಿಯಿಂದ ಆರೋಗ್ಯ ಸೌಲಭ್ಯ, ವಿಮೆ, ವಿದ್ಯಾರ್ಥಿ ವೇತನ, ನಿವೃತ್ತಿ ವೇತನ, ವಿದ್ಯಾರ್ಥಿ ವೇತನ, ವಿವಾಹ ಪ್ರೋತ್ಸಾಹ ಧನ, ಕಾರ್ಮಿಕರಿಗೆ ವೃತ್ತಿಗೆ ಅನುಗುಣವಾಗಿ ಸಲಕರಣೆಗಳ ಕಿಟ್, ಮಹಿಳೆಯರಿಗಾಗಿ ನ್ಯಾಪ್ ಕಿಟ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು ಅರ್ಹರು ಇದರ ಪ್ರಯೋಜನಾ ಪಡೆದುಕೊಳ್ಳಿ ಎಂದರು.
ಅಲ್ಲದೇ ನಿಜವಾದ ಅರ್ಹ ಫಲಾನುಭವಿಗಳು ಮಾತ್ರ ಇಲಾಖೆಯ ಸೌಲಭ್ಯ ಪಡೆಯಬೇಕಿದ್ದು, ಕೆಲವರು ಸುಳ್ಳು ಮಾಹಿತಿಗಳನ್ನು ನೀಡಿ ನೊಂದಾಯಿಸಿಕೊಂಡಿರುವುದು ಇಲಾಖೆಯ ಗಮನಕ್ಕೆ ಕಂಡು ಬಂದಿದ್ದು, ಅಂತಹ ಕಾರ್ಮಿಕ ಕಾರ್ಡ್ ಗಳನ್ನು ರದ್ದು ಪಡಿಸುವ ಜತೆಗೆ ಅಂತವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಅರ್ಹ ಕಟ್ಟಡ ನಿರ್ಮಾಣ ಕಾರ್ಮಿಕರು ಮಾತ್ರ ಇಲಾಖೆಯಲ್ಲಿ ಅಗತ್ಯ ದಾಖಲೆಗಳನ್ನು ನೀಡಿ ನೊಂದಾಯಿಸಿಕೊಂಡು ಸೌಲಭ್ಯಗಳನ್ನು ಪಡೆದುಕೊಳ್ಳಿ ಎಂದು ಮನವಿ ಮಾಡಿದರು.
ಕಾರ್ಮಿಕ ಇಲಾಖೆಯ ಡಿಒ ಚಂದ್ರಕಾಂತ್, ವೀರಭದ್ರೇಶ್ವರ ಕಟ್ಟಡ ಕಾರ್ಮಿಕರ ಜಿಲ್ಲಾ ಸಂಘದ ಅಧ್ಯಕ್ಷ ಬಿ.ಎಚ್.ಕುಮಾರ, ಪ್ರಧಾನ ಕಾರ್ಯದರ್ಶಿ ಕೆ.ಎಸ್.ನಟರಾಜ್, ರವಿ, ಮನೋಹರ, ತಿರುಮಲ ಹಾಜರಿದ್ದರು.
೧೬ ಕೆಆರ್ಎನ್-೨:- ಕೆ.ಆರ್.ನಗರದ ಕಾರ್ಮಿಕರ ಇಲಾಖೆಯ ಕಚೇರಿಯಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಕಾರ್ಮಿಕ ನಿರೀಕ್ಷಕ ಎಚ್.ಕೆ.ಗೋವಿಂದರಾಜು ನೆರವೇರಿಸಿದರು.