ಪ್ರತಿನಿಧಿ ವರದಿ ಗುಂಡ್ಲುಪೇಟೆ
ವಿದ್ಯಾರ್ಥಿಗಳು ಓದಿನ ಜತೆ ಕ್ರೀಡೆಯಲ್ಲೂ ಭಾಗವಹಿಸಬೇಕು ಕ್ರೀಡೆಗಳಲ್ಲಿ ಮಾಡಿದ ಉತ್ತಮ ಸಾಧನೆಯಿಂದ ಪಡೆದ ಪ್ರಶಸ್ತಿ ಪುರಸ್ಕಾರಗಳು ಮುಂದಿನ ದಿನಗಳಲ್ಲಿ ಅನುಕೂಲವಾಗಲಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ತಿಳಿಸಿದರು.
ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ 2024-25ನೇ ಸಾಲಿನ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿನ ಕ್ರೀಡಾಪ್ರತಿಭೆಯನ್ನು ಹೊರತರಲು ಇಂತಹ ತಾಲೂಕು ಮಟ್ಟದ ಕ್ರೀಡಾಕೂಟಗಳು ನೆರವಾಗಿದೆ. ಇಲ್ಲಿ ಜಯಗಳಿಸಿದ ಕ್ರೀಡಾಪಟುಗಳು ಜಿಲ್ಲಾ ಮತ್ತು ರಾಜ್ಯ ಮಟ್ಟದ ಜತೆಗೆ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ತಾಲೂಕಿಗೆ ಕೀರ್ತಿ ತರಲಿ ಎಂದು ಹಾರೈಸಿದರು.
ತಾಲೂಕಿನ ವಿವಿಧ ಶಾಲೆಗಳಿಂದ ಭಾಗವಹಿಸಿದ ಶಾಲೆಯ ವಿದ್ಯಾರ್ಥಿಗಳು ಖೋಖೊ, ಕಬ್ಬಡ್ಡಿ, ಥ್ರೊಬಲ್, ವಾಲಿಬಾಲ್, ಗುಂಪು ಕ್ರೀಡೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸಲು ಈಗಾಗಲೇ ಸರ್ಕಾರಕ್ಕೆಪ್ರಸ್ತಾವನೆ ಸಲ್ಲಿಸಲಾಗಿದೆ ಸದ್ಯದಲ್ಲಿಯೇ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ್, ಪುರಸಭಾ ಸದಸ್ಯ ಕುಮಾರ್, ಸಂಪನ್ಮೂಲ ಸಮನ್ವಯಾಧಿಕಾರಿ ಸರೋಜಮ್ಮ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗುರುಪ್ರಸಾದ್, ಮಂಜುನಾಥ್, ಶಿವಯ್ಯ,ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ರುದ್ರಸ್ವಾಮಿ, ಜಿಲ್ಲಾ ಘಟಕದ ಗೌರವಾಧ್ಯಕ್ಷ ಮಹೇಶ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶಾಂತಮಲ್ಲ, ವಿಭಾಗೀಯ ಉಪಾಧ್ಯಕ್ಷ ದಿನೇಶ್, ಶಿವಸ್ವಾಮಿ, ಮಹದೇವಸ್ವಾಮಿ, ಮಣಿಕಂಠಚಾರ್, ರವೀಂದ್ರ, ಸತೀಶ್, ಶಿವಕುಮಾರ್, ಪಶುಪತಿ, ವೀರಭದ್ರಪ್ಪ, ಸತೀಶ್, ದೈಹಿಕ ಶಿಕ್ಷಣ ಪರಿವೀಕ್ಷಕ ಮಲ್ಲನಾಯಕ, ಚಿಕ್ಕಮಲ್ಲಪ್ಪ, ದೈಹಿಕ ಶಿಕ್ಷಕರಾದ ಗೋಪಾಲ ಶೆಟ್ಟಿ, ಸೇರಿದಂತೆ ಮುಂತಾದವರು ಹಾಜರಿದ್ದರು.