ಮುಡಾ ವಿಚಾರವಾಗಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ಕೊಟ್ಟ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಒತ್ತಾಯಿಸಿ ಇಂದು ಮೈಸೂರಿನ ಗಾಂಧಿ ವೃತ್ತದಲ್ಲಿ ಪ್ರತಿಭಟಸಿದ್ದಾರೆ.
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಮುಂದಾದ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಕೋಪಗೊಂಡು ಪ್ರತಿಭಟನೆ ಮೊಟಕುಗೊಳಿಸಿ, ವೇದಿಕೆಯಿಂದ ನಿರ್ಗಮಿಸಿದ ಘಟನೆ ಜರುಗಿದೆ. ಪ್ರತಾಪ್ ಸಿಂಹ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ಮುಂದಾದ ಸಂದರ್ಭದಲ್ಲಿಯೇ, ಅತ್ತ ವೇದಿಕೆ ಮೇಲೆ ಭಾಷಣ ಮಾಡಲು ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಮುಂದಾದರು. ಆದರೆ ಪ್ರತಾಪ್ ಸಿಂಹ ಮಾಧ್ಯಮಗಳೊಂದಿಗೆ ಮಾತನಾಡಲು ಆರಂಭಿಸುತ್ತಿದ್ದಂತೆ ಕುಪಿತಗೊಂಡ ನಾಗೇಂದ್ರ, ವೇದಿಕೆಯಿಂದ ಕೆಳಗಿಳಿದು ನಿರ್ಗಮಿಸಿದ್ದಾರೆ.
ಪ್ರತಿಭಟನೆಯನ್ನು ಮೊಟಕುಗೊಳಿಸಿದ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೂ ಹಾರಿಕೆಯ ಉತ್ತರ ನೀಡಿರುವ ನಾಗೇಂದ್ರ.
ಬೈಟ್ ಕೊಟ್ಟ ಮೇಲೆ ಇನ್ನೇನಿದೆ? ಹಾಗಾಗಿ ಪ್ರತಿಭಟನೆ ಮುಗಿಸಿದೆವು ಎಂದು ಹೇಳಿ ಪ್ರತಿಭಟನೆಯಿಂದ ಹೊರನಡೆದಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ವಿರುದ್ಧದ ಪ್ರತಿಭಟನೆ ವೇಳೆ ಬಿಜೆಪಿ ನಾಯಕರ ನಡುವಿನ ಮುಸುಕಿನ ಗುದ್ದಾಟ ಇಂದು ತುಂಬಿದ ಸಭೆಯಲ್ಲಿ ಬೆಳಕಿಗೆ ಬಂದಿದೆ.