ಪ್ರತಿನಿಧಿ ವರದಿ ಹನೂರು
ತಾಲೂಕಿನ ಅಜ್ಜೀಪುರ ಸಮೀಪದಲ್ಲಿ ಬರುವ ಉಡುತೊರೆ ಜಲಾಶಯ ಬಲದಂಡೆ ಗೇಟ್ ದುರಸ್ತಿ ಪಡಿಸಿರುವುದನ್ನು ಪರಿಶೀಲನೆ ನಡೆಸಿದರು.
ಬಹು ನಿರೀಕ್ಷಿತ ಕೋಟಿ ವೆಚ್ಚದ ದುರಸ್ತಿ ಕಾರ್ಯವನ್ನು ಉಡುತೊರೆ ಜಲಾಶಯ ಸಂಬಂಧಿಸಿದ ನೀರಾವರಿ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಈ ಭಾಗದ ರೈತರ ಜಮೀನುಗಳಿಗೆ ನೀರಾವರಿ ಕಲ್ಪಿಸುವ ಉದ್ದೇಶದಿಂದ ಮಾಡಲಾಗಿರುವ ಜಲಾಯವು, ರೈತರ ಜಮೀನುಗಳಿಗೆ ನೀರು ಒದಗಿಸುವ ಹಿನ್ನೆಲೆಯಲ್ಲಿ ಇಲ್ಲಿನ ಸಮಸ್ಯೆಗಳನ್ನು ವಿಸ್ತಾರವಾಗಿ ಅಧಿಕಾರಿಗಳು ಮತ್ತು ನೀರಾವರಿ ಸಚಿವರ ಜತೆ ಚರ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಭಾಗದ ರೈತರಿಗೆ ಇದರ ಸದ್ಬಳಕೆ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಮೂಲಕ ಯೋಜನೆ ಸಿದ್ಧಪಡಿಸಲಾಗಿದೆ.
ನಾಲೆಗಳ ದುರಸ್ತಿಗೆ ಕ್ರಮ: ಎಡದಂಡೆ, ಬಲದಂಡೆ ನಾಲೆಗಳ ಒಳಭಾಗದಲ್ಲಿ ಮತ್ತು ಮೇಲ್ಭಾಗದಲ್ಲಿ ಗಿಡ ಗಂಟೆಗಳು ಬೆಳೆದು ನಿಂತಿದ್ದೆ. ಹಲವಾರು ವರ್ಷಗಳಿಂದ ನಾಲೆಯಲ್ಲಿರುವ ರಾಡಿಗಳನ್ನು ಸ್ವಚ್ಛಗೊಳಿಸದೆ ಇರುವುದರಿಂದ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಬಾರಿಯಾದರೂ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿದ್ದೇನೆ ಎಂದು ತಿಳಿಸಿದರು.
ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿ ಪ್ರವೀಣ್ , ಮುಖಂಡ ಚಿನ್ನವೆಂಕಟ, ಬಾಬು, ಮುಸ್ತಪ್ಪ, ಡಿ.ಆರ್.ಮಾದೇಶ್, ವಿಜಯ್ ಕುಮಾರ್, ಡಿ.ಕೆ.ರಾಜು, ಅತಿಕ್, ಶಿವರುದ್ರ, ಎಸ್.ಆರ್.ಮಹಾದೇವ್, ಸುರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು..