ಪ್ರತಿನಿಧಿ ವರದಿ ಹನೂರು
ಪಟ್ಟಣದ ಶ್ರೀ ಕ್ರಿಸ್ತ ರಾಜ ವಿದ್ಯಾಸಂಸ್ಥೆಯಲ್ಲಿ ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ ಮಲೆ ಮಹದೇಶ್ವರ ಬೆಟ್ಟದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸುವುದರ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದ ಯುವ ಮುಖಂಡ ರಾಮು ಮಾತನಾಡಿ, ಮಲೆಮಹದೇಶ್ವರ ಬೆಟ್ಟದ ಮಹದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಳೆದ 25 ವರ್ಷಗಳಲ್ಲಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಶಸ್ತಿಯನ್ನೇ ಪಡೆದಿರಲಿಲ್ಲ, ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳು ಉತ್ತಮ ಅಭ್ಯಾಸ ಮಾಡಿದ ಹಿನ್ನೆಲೆ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಕ್ರೀಡೆಗಳಲ್ಲಿಯೂ ವಿದ್ಯಾರ್ಥಿಗಳಿಗೆ ತರಬೇತಿ ಕೊಡಿಸಲು ಒಂದು ಯುವಕರ ತಂಡ ರಚನೆ ಮಾಡಿಕೊಂಡಿದ್ದು ದೈಹಿಕ ಶಿಕ್ಷಕರ ಜೊತೆ ನಮ್ಮ ಯುವಕರು ಸಹಕಾರ ನೀಡಲಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ವೇಳೆ ದೈಹಿಕ ಶಿಕ್ಷಕರಾದ ಧನರಾಜ್, ಮುಖಂಡರಾದ ಪ್ರದೀಪ್ ಕುಮಾರ್, ಕಾರ್ತಿಕ್, ಸುರೇಶ್, ಶ್ಯಾಮ,ಕಾರ್ತಿಕ್ ಪ್ರಸಾದ್, ನಾಗೇಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.