ಮೈಸೂರು: ಊಟಿ ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಆಗಮಿಸಿದ ಮೇಘಾಲಯ ರಾಜ್ಯಪಾಲರಾದ ಸಿ ಹೆಚ್ ವಿಜಯಶಂಕರ್ ಅವರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ತನ್ವೀರ್ ಸೇಠ್ ಶುಭಾಶಯ ಕೋರಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ಟಿ ಎಸ್ ಶ್ರೀವತ್ಸ , ಬಿಜೆಪಿ ಹಿರಿಯ ಮುಖಂಡರಾದ ಮಾರುತಿ ರಾವ್ ಪವರ್, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಎಂ ಆರ್ ಬಾಲಕೃಷ್ಣ, ಶಂಕರ್ ನಾರಾಯಣ ಶಾಸ್ತ್ರಿ, ಹೊಯ್ಸಳ ಸಂಘದ ನಿರ್ದೇಶಕರಾದ ಪ್ರಶಾಂತ್ ಹಾಗೂ ಗಣಪತಿ ಸಚ್ಚಿದಾನಂದ ಆಶ್ರಮದ ಸ್ವಯಂಸೇವಕರು ಹಾಜರಿದ್ದರು.