ಮಂಡ್ಯ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು ಈ ಮಧ್ಯೆ ವಾಹನ ಬಿಡದ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದ ನಗರಸಭೆ ಕಚೇರಿಯ ಮುಂಭಾಗ ಭಾರೀ ಹೈಡ್ರಾಮಾ ನಡೆದಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಎದುರಲ್ಲೇ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ವಾಗ್ವಾದ ನಡೆದು ಹೈಡ್ರಾಮಾ ಸೃಷ್ಠಿಯಾಗಿದೆ.
ಇಂದು ಮಂಡ್ಯ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ನಡೆಯುತ್ತಿದ್ದು, ಈ ವೇಳೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ಸದಸ್ಯರ ವಾಹನವನ್ನು ಮಾತ್ರ ನಗರಸಭೆ ಆವರಣದೊಳಗೆ ಬಿಡಲಾಗುತ್ತಿದೆ. ಆದರೆ ಕಾಂಗ್ರೆಸ್ ಸದಸ್ಯರಿರುವ ವಾಹನವನ್ನು ಪೊಲೀಸರು ಬಿಡುತ್ತಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.
ಕೇಂದ್ರ ಸಚಿವರ ಎದರೇ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ತಳ್ಳಾಟ ನೂಕಾಟ ನಡೆದಿದೆ ಎನ್ನಲಾಗಿದೆ. ಇನ್ನು ಮಂಡ್ಯ ನಗರಸಭೆ ಅಧಿಕಾರಕ್ಕಾಗಿ ಜೆಡಿಎಸ್ –ಕಾಂಗ್ರೆಸ್ ನಡುವೆ ಪೈಪೋಟಿ ಜೋರಾಗಿದ್ದು ಜೆಡಿಎಸ್ ನ ಇಬ್ಬರು ಸದಸ್ಯರನ್ನ ಕಾಂಗ್ರೆಸ್ ಅಪರೇಷನ್ ಹಸ್ತದ ಮೂಲಕ ಸೆಳೆದಿದ್ದಾರೆ. ಹಾಗೆಯೇ ಜೆಡಿಎಸ್ ಕೂಡ ರಿವರ್ಸ್ ಆಪರೇಷನ್ ಮಾಡಿ ಕಾಂಗ್ರೆಸ್ ನ ಓರ್ವ ಸದಸ್ಯನನ್ನ ಸೆಳೆದಿದೆ ಎನ್ನಲಾಗಿದೆ.