ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೆ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.ಪ್ರಕರಣ ಸಂಬಂಧ ಇಂದು ನಟ ದರ್ಶನ್ ಅವರನ್ನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇದೀಗ ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೂ 13 ದಿನಗಳ ಕಾಲ ಅಂದರೇ ಸೆಪ್ಟಂಬರ್ 9ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.ಈ ನಡುವೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ನಟ ದರ್ಶನ್ ಅವರನ್ನ ಬಳ್ಳಾರಿ ಜೈಲಿಗೆ ಇಂದು ಸ್ಥಳಾಂತರಿಸಲಿದ್ದಾರೆ.ಇನ್ನೇನು ಕೆಲವೇ ದಿನಗಳಲ್ಲಿ ರೇಣುಕಾಸ್ವಾಮಿ ಕೊಲೆ ಕೇಸ್ ನ ಚಾರ್ಜ್ ಶೀಟ್ ಅನ್ನು ಪೊಲೀಸರು ಸಬ್ಮಿಟ್ ಮಾಡಲಿದ್ದಾರೆ. ಕೇಸ್ ನಲ್ಲಿ ಪವಿತ್ರಾಗೌಡ A1 ಅಂಡ್ ದರ್ಶನ್ A2 ಆರೋಪಿಯಾಗಿದ್ದಾರೆ.
A1 ಆರೋಪಿ ಪವಿತ್ರಾ ಗೌಡಗೆ ಅಶ್ಲೀಲ ಮೆಸ್ಸೇಜ್ ಕಳುಹಿಸಿದ ಹಿನ್ನೆಲೆ ರೇಣುಕಾಸ್ವಾಮಿಯನ್ನು ದರ್ಶನ್ ಅಂಡ್ ಗ್ಯಾಂಗ್ ಹತ್ಯೆ ಮಾಡಲಾಗಿದೆ ಎಂಬ ಆರೋಪದ ಅಡಿಯಲ್ಲಿ ಜೈಲು ಸೇರಿದ್ದಾರೆ ದರ್ಶನ್. ಇದೀಗ A2 ಆರೋಪಿಯಾಗಿ ಕೇಸ್ ನಲ್ಲಿ ಫಿಟ್ ಆಗಿರುವ ನಟ ದರ್ಶನ್ ಜೈಲು ಸೇರಿ 3 ತಿಂಗಳುಗಳೆ ಸಮೀಪಿಸುತ್ತಾ ಬಂದಿದೆ. ಆದರೆ ನಟ ದರ್ಶನ್ ಮತ್ತು ಸಂಗಡಿಗರ ವಿರುದ್ಧವಾಗಿ ಸಾಕ್ಷಿಗಳು ಬಲವಾಗಿರುವ ಕಾರಣ ದರ್ಶನ್ ಗೆ ಬೇಲ್ ಸಿಗುವುದು ಕಷ್ಟಕರವಾಗಿತ್ತು. ಆದರೀಗ ಸಂಕಷ್ಟದ ಮೇಲೆ ಸಂಕಷ್ಟ ಹೊತ್ತಿರುವ ನಟ ದರ್ಶನ್ ಜೈಲಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ ಎಂಬ ಫೋಟೋ ಹಾಗೂ ವೀಡಿಯೋ ವೈರಲ್ ಆದ ಬೆನ್ನಲ್ಲೇ ಇಂದು ನಟ ದರ್ಶನ್ ಬಳ್ಳರಿ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ. 17 ಆರೋಪಿಗಳನ್ನು ಪ್ರಕರಣದಲ್ಲಿ ಬಂಧಿಸಲಾಗಿದ್ದು, ಡಿ ಬಾಸ್ ಅಂಡ್ ಗ್ಯಾಂಗ್ ಇಂದು ಒಂದೊಂದು ಜೈಲು ಸೇರಲಿದ್ದಾರೆ.