ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ಅನುಮತಿ ವಿಚಾರ ಇಂದು ಸಿಎಂ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆಗೆ ಹಾಜರಾಗಬೇಕಿದೆ. ಈ ಹಿನ್ನೆಲೆ
ಸಿದ್ದರಾಮಯ್ಯಗೆ ಒಳಿತಾಗಲಿ ಎಂದು ಸಿಎಂ ಅಭಿಮಾನಿಗಳು ಕೊಲ್ಲಾಪುರದಮ್ಮನಿಗೆ ಪ್ರಾರ್ಥಿಸಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಮೈಸೂರಿನ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಕೊಲ್ಲಾಪುರದಮ್ಮ ದೇಗುಲದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ದೇವರಿಗೆ ಅರ್ಚನೆ, ಸಂಕಲ್ಪ ಪೂಜೆ, ಮಂಗಳಾರತಿ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ದೇವಾಲಯದಲ್ಲಿ ಪೂಜೆ ಸಲ್ಲಿಸುವ ವೇಳೆ ಸಿಎಂ ಸಿದ್ದರಾಮಯ್ಯ ಭಾವಚಿತ್ರ ಹಿಡಿದು ಪ್ರಾರ್ಥನೆ ಮಾಡಿರುವ ಅಭಿಮಾನಿಗಳು, ನೂರಕ್ಕೆ ನೂರು ಸ್ವಚ್ಛ, ಕಳಂಕ ರಹಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಿದ್ದರಾಮಯ್ಯ ಮೇಲೆ 100% ಸುಳ್ಳು ಆರೋಪ ಎಂಬ ಚಿತ್ರಗಳನ್ನು ಹಿಡಿದು ಸಿಎಂ ದೋಷ ಮುಕ್ತರಾಗುವಂತೆ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ.