ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಚಿಕ್ಕಹುಣಸೂರಿನಲ್ಲಿ ಅಕ್ರಮವಾಗಿ ಜೀವಂತ ಉಡ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ದೇವಕಾರಿ (54) ಬಂಧಿತ ಆರೋಪಿ. ದೇವಕಾರಿ ಹುಣಸೂರು ತಾಲ್ಲೂಕಿನ ಪಕ್ಷಿರಾಜಪುರದ ನಿವಾಸಿ. ಜೀವಂತ ಉಡ ಮಾರಾಟ ಮಾಡಲು ಯತ್ನಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಅರಣ್ಯಧಿಕಾರಿಗಳು ದೇವಕಾರಿಯನ್ನು ಜೀವಂತ ಉಡದೊಂದಿಗೆ ಬಂಧಿಸಿದ್ದಾರೆ. ಸದ್ಯ ವ್ಯಕ್ತಿಯಿಂದ ಉಡವನ್ನು ಅರಣ್ಯ ಅಧಿಕಾರಿಗಳು ರಕ್ಷಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.