ಪ್ರತಿನಿಧಿ ವರದಿ ಹಾಸನ
ರಾಜ್ಯ ಸಂಪುಟ ಪುನರ್ ರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬಡ್ತಿ ಸಿಗುತ್ತದೆ ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಅವರ ಹೇಳಿಕೆಗೆ ಅದರ ಬಗ್ಗೆ ಅವರನ್ನೇ ಕೇಳಿ ಎಂದರು. ಕಾಂಗ್ರೆಸ್ ಪಕ್ಷ ಎಂದರೆ ಹೈಕಮಾಂಡ್ ನಿಂದ ನಿರ್ದೇಶನಗೊಳ್ಳುವ ಪಕ್ಷ. ರಾಹುಲ್ ಗಾಂಧಿ ಅವರು ಅವರಿಗೆ ಬಡ್ತಿ ಕೊಡ್ತೀನಿ ಅಂದರೆ ನಾವು ತಪ್ಪಿಸಲು ಆಗುತ್ತಾ, ಬಡ್ತಿ ಇರಬಹುದು, ಯಾವುದೇ ಇರಬಹುದು ಅದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಸೂಚ್ಯವಾಗಿ ಹೇಳಿದರು.
ಮುಡಾ ಹಗರಣ ಕುರಿತು ಇಂದು ಸಿಎಂ ಸಿದ್ದರಾಮಯ್ಯ ಅವರ ಕುರಿತು ಇಂದು ತೀರ್ಪು ಹೊರ ಬೀಳುವ ಕುರಿತು ಪ್ರತಿಕ್ರಿಯಿಸಿದ ಅವರು, ನಾನೂ ಹತ್ತು ವರ್ಷ ಪ್ರಾಕ್ಟಿಸ್ ಮಾಡಿದ್ದೀನಿ. ಸಿದ್ದರಾಮಯ್ಯ ಅವರ ಪರ ವಕೀಲರು ಸಿಂಫ್ವಿ ಅವರು ವಾದ ಮಂಡಿಸಿದ್ದಾರೆ. ಅರ್ಜಿದಾರರ ಪರ ವಕೀಲರು ನ್ಯಾಯಾಧೀಶರ ಗಮನಕ್ಕೆ ತಂದಿದ್ದಾರೆ. ಇಂದೇ ತೀರ್ಪು ಬರಲ್ಲ, ಇನ್ನೂ ಸಮಯ ತೆಗೆದುಕೊಳ್ಳುತ್ತೆ ಎಂದು ಸಚಿವರು ಹೇಳಿದರು.
ಹೇಮಾವತಿ ನದಿಗೆ ಬಾಗಿನ ಅರ್ಪಿಸುವ ಸಂಬಂಧ ಮುಖ್ಯಮಂತ್ರಿ ಅವರ ಸಮಯ ಕೇಳಿದ್ದೀನಿ. ಅವರು ಸಮಯ ಕೊಟ್ಟ ಕೂಡಲೇ ಬಾಗಿನ ಅರ್ಪಿಸುವ ಕಾರ್ಯಕ್ರಮ ನಿಗದಿ ಮಾಡಲಾಗುವುದು ಎಂದು ಹೇಳಿದರು.