ಟಿ ನರಸೀಪುರ: ಪೊಲೀಸ್ ಇಲಾಖೆ ಹಾಗೂ ಪುರಸಭೆಯ ಸಂಯುಕ್ತಾಶ್ರಯದಲ್ಲಿ ಇಂದು ಟಿ ನರಸೀಪುರ ಪಟ್ಟಣದಲ್ಲಿ ಫುಟ್ ಪಾತ್ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ತರಕಾರಿ ವ್ಯಾಪಾರಸ್ಥರು, ಅಂಗಡಿ ಮಾಲೀಕರಿಂದ ಫುಟ್ ಪಾತ್ ಒತ್ತುವರಿಯಾಗಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಫುಟ್ ಪಾತ್ ಒತ್ತುವರಿಯನ್ನು ಪೊಲೀಸ್ ಇಲಾಖೆ ವತಿಯಿಂದ ತೆರವುಗೊಳಿಸಲಾಗಿದೆ. ಸ್ಥಳದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಪೊಲೀಸ್ ಇಲಾಖೆಯಿಂದ ಈ ಸಮಯದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿತ್ತು.