ಮೈಸೂರು: ಪ್ರಾಧಿಕಾರದ ಸಭೆಯ ಮೂಲಕ ಬೆಟ್ಟದ ಅಭಿವೃದ್ಧಿಗೆ ಚಾಲನೆ ಕೊಡುತ್ತಿದ್ದೇವೆ. ಆದರೆ ಪ್ರಮೋದಾದೇವಿ ಒಡೆಯರ್ ಯಾಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೋ ಗೊತ್ತಿಲ್ಲ ಎಂದು ಮೈಸೂರಿನಲ್ಲಿಂದು ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಹೇಳಿದರು.
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯ ಮುನ್ನ ಮಅಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚಾಮುಂಡಿಬೆಟ್ಟ ಪ್ರಾಧಿಕಾರದ ಸಭೆ ನಡೆಯುತ್ತಿದೆ. ಪ್ರಾಧಿಕಾರದ ಸಭೆಯ ಮೂಲಕ ಬೆಟ್ಟದ ಅಭಿವೃದ್ಧಿಗೆ ಚಾಲನೆ ಕೊಡುತ್ತಿದ್ದೇವೆ. ಆದರೆ ಪ್ರಮೋದಾದೇವಿ ಒಡೆಯರ್ ಯಾಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೋ ಗೊತ್ತಿಲ್ಲ. ಸಭೆ ನಡೆಸಲು ಯಾವುದೇ ತಾಂತ್ರಿಕ ಸಮಸ್ಯೆಯಿಲ್ಲ ಹೀಗಾಗಿ ನಿಗದಿತ ದಿನಾಂಕದಂದೇ ಸಭೆ ನಡೆಯುತ್ತಿದೆ ಎಂದರು.
ಇದೇ ವೇಳೆ ಸಿಎಂ ಬದಲಾವಣೆ ವಿಚಾರವಾಗಿ, ಸಿಎಂ ಬದಲಾವಣೆ ವಿಚಾರವೇ ಅಪ್ರಸ್ತುತ ಈ ವರೆಗೂ ಆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಹೀಗಾಗಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.