ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಚಾರ ಹೈಕೋರ್ಟ್ ನಲ್ಲಿದ್ದು, ಮುಂದಿನ ಸೂಚನೆ ಬರುವವರೆಗೂ ಕಾಯಿದೆ ಜಾರಿ ಮಾಡಬಾರದು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹ ಮಾಡಿದ್ದಾರೆ. ಪತ್ರದ ಮೂಲಕ ಈ ವಿಚಾರವಾಗಿ ತೀವ್ರ ವಿರೋಧ ವ್ಯಕ್ತಪಡಿಸಿರುವ ಸಂಸದ ಸೆಪ್ಟೆಂಬರ್ 5 ರಂದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ, ನಿಮ್ಮ ಕಾನೂನನ್ನು ಎತ್ತಿಹಿಡಿಯಲು ಸರಿಯಾದ ಪ್ರಕ್ರಿಯೆ ಅನುಸರಿಸಿ ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
https://x.com/yaduveerwadiyar/status/1830826342088139016?t=kVwueeAqxwfzGERxASVkbA&s=19
ತಲೆಮಾರುಗಳಿಂದ ನಡೆದು ಬರುತ್ತಿರುವ ಸಂಪ್ರದಾಯವನ್ನು ಮೊಟಕುಗೊಳಿಸಲು ಹಾಗೂ ಚಾಮುಂಡಿ ಬೆಟ್ಟದಲ್ಲಿ ಒಡೆಯರ್ ಮನೆತನದ ಅಸ್ತಿತ್ವವನ್ನೆ ಕಸಿಯಲು ಹೊರಟಿರುವ ರಾಜ್ಯಸರ್ಕಾರದ ವಿರುದ್ಧ ಒಡೆಯರ್ ಮನೆತನ ಹೈಕೋರ್ಟ್ ಮೆಟ್ಟಿಲೇರಿದ್ದರೂ , ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಲಾಗಿದೆ. ಇನ್ನು ಮೈಸೂರು ರಾಜಮನೆತನದ ಮುಂದಿನ ನಡೆಯೇನು ಎಂಬುದನ್ನ ಕಾದುನೋಡಬೇಕಿದೆ.