ಸಿಎಂ ಸಿದ್ದರಾಮಯ್ಯ ಆಪ್ತ ಹಾಗೂ ಮುಡಾ ಅಧ್ಯಕ್ಷ ಕೆ. ಮರಿಗೌಡ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಡಾ ಹಗರಣದ ಪ್ರತಿಧ್ವನಿ, ಅತಿಯಾದ ಒತ್ತಡದಿಂದಾಗಿ ಮರಿಗೌಡ ಆಸ್ಪತ್ರೆ ಸೇರಿದ್ದಾರೆ ಎನ್ನಲಾಗಿದೆ. ಬೆಂಗಳೂರಿಗೆ ತೆರಳಿದ್ದ ವೇಳೆ ಮರಿಗೌಡಗೆ ಕಾಣಿಸಿಕೊಂಡ ಅನಾರೋಗ್ಯದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಮೈಸೂರಿಗೆ ಮರಿಗೌಡ ಅವರನ್ನು ಸ್ಥಳಾಂತರಿಸಲಾಗಿದೆ.
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮರೀಗೌಡ ತೀವ್ರ ಅನಾರೋಗ್ಯಕ್ಕೀಡಾಗಿದ್ದಾರೆ ಎನ್ನಲಾಗಿದೆ.
ಮರೀಗೌಡ ಮುಡಾ ಅಧ್ಯಕ್ಷರಾದ ಬಳಿಕ ಮುಡಾ ಹಗರಣದ ಸುಳಿಯಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಶಿಷ್ಯ ಮರಿಗೌಡರಿಂದಲೇ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎಂದು ಹೇಳಲಾಗ್ತಿದೆ.