ಮೈಸೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪ್ರತಿ 6 ವರ್ಷಗಳಿಗೊಮ್ಮೆ ಸದಸ್ಯತ್ವ ಅಭಿಯಾನ ನಡೆಯಲಿದ್ದು, ಇಂದು ನಗರದ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು.
ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಸದ ಯದುವೀರ್ ಕೃಷದತ್ತ ಚಾಮರಾಜ ಒಡೆಯರ್ , ಟಾಲ್ ಫ್ರೀ 8800002024 ನಂಬರ್ ಗೆ ಮಿಸ್ಡ್ ಕಾಲ್ ಮಾಡುವ ಮೂಲಕ ಬಿಜೆಪಿ ಸದಸ್ಯತ್ವವನ್ನು ಪಡೆಯಬಹುದಾಗಿದೆ ಎಂದು ತಿಳಿಸಿದರು. ಇದೇ ವೇಳೆ ನಾವೆಲ್ಲ ಬಿಜೆಪಿ ಸದಸ್ಯರು ಎಂದು ಬಿಜೆಪಿ ಮುಖಂಡರು , ಕಾರ್ಯಕರ್ತರು ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ ರಾಜೇಂದ್ರ, ಡಾ. ಲಕ್ಷ್ಮಿ ಅಶ್ವಿನಿಗೌಡ, ಮುಖಂಡರಾದ ಗಿರಿಧರ್, ಕವೀಶ್ ಗೌಡ, ಸಂದೇಶ್ ಸ್ವಾಮಿ, ಶಿವಕುಮಾರ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ರು.