ಚಿಕ್ಕಮಗಳೂರು : ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿಯಲ್ಲಿ ಈ ವರೆಗೆ ಒಟ್ಟು 126 ಕೋಟಿ ರೂ. ಪಡಿತರ ಹಣವನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಶಿವಾನಂದ ಸ್ವಾಮಿ ತಿಳಿಸಿದರು.
ಆಹಾರ ಇಲಾಖೆ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 2.59 ಲಕ್ಷ ಪಡಿತರ ಚೀಟಿಗಳಿದ್ದು, ಪ್ರತಿ ತಿಂಗಳು 13 ಕೋಟಿ ರೂ.ಗಳಷ್ಟು ಹಣವನ್ನು ಈ ಯೋಜನೆಗೆ ಸರ್ಕಾರ ವಿನಿಯೋಗಿಸುತ್ತಿದೆ. ಕೆಲವೆಡೆ ಆನ್ ಲೈನ್ ನಲ್ಲಿ ತಾಂತ್ರಿಕ ಸಮಸ್ಯೆ ಇದ್ದು, ಸುಮಾರು 7 ಸಾವಿರ ಜನರಿಗೆ ಈ ಸೌಲಭ್ಯ ತಲುಪಿಲ್ಲ. ಸದ್ಯದಲ್ಲೆ ಈ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.