ಶಾಸಕ ಕೆ.ಎಂ.ಉದಯ್ ಅಭಿಪ್ರಾಯ
ಪ್ರತಿನಿಧಿ ವರದಿ ಮದ್ದೂರು
ವಿದ್ಯೆಯನ್ನು ಯಾರಿಂದಲ್ಲೂ ಕದಿಯಲಾಗದ ಆಸ್ತಿಯಾಗಿದೆ ಇದನ್ನು ವಿದ್ಯಾರ್ಥಿಗಳು ದುರ್ಬಳಕೆ ಮಾಡಿಕೊಳ್ಳದೆ ಸದುಪಯೋಗ ಪಡಿಸಿಕೊಂಡಲ್ಲಿ ಸಮಾಜದಲ್ಲಿ ಸತ್ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯ ಶಾಸಕ ಕೆ.ಎಂ.ಉದಯ್ ಹೇಳಿದರು.
ತಾಲೂಕಿನ ಬೆಸಗರಹಳ್ಳಿಯ ಹೊಂಬಾಳಮ್ಮ ಡಿ.ಕರಡೀಗೌಡ ಪದವಿಪೂರ್ವ ಕಾಲೇಜಿನಲ್ಲಿ ಆವರಣದಲ್ಲಿ ಬುಧವಾರ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಡ್ಯ ಜಿಲ್ಲೆ, ಹೊಂಬಾಳಮ್ಮ ಡಿ.ಕರಡೀಗೌಡ ಪದವಿಪೂರ್ವ ಕಾಲೇಜು ವತಿಯಿಂದ ಆಯೋಜಿಸಿದ್ದ 2024-25 ನೇ ಸಾಲಿನ ಮದ್ದೂರು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಚಟುವಟಿಕೆಗಳ ಸ್ವರ್ಧೆ ಉದ್ಘಾಟಿಸಿ ಮಾತನಾಡಿದರು.
ಉತ್ತಮ ಶಿಕ್ಷಣ ಪಡೆದುಕೊಂಡರೆ ಎಲ್ಲಿ ಬೇಕಾದರೂ ಅತ್ಯುತ್ತಮ ಬದುಕು ಕಟ್ಟಿಕೊಂಡು ನೆಮ್ಮದಿಯಾಗಿ ಜೀವನ ನಡೆಸಬಹುದು. ವಿದ್ಯಾಥರ್ಿಗಳು ವಿದ್ಯಾಥರ್ಿ ದೆಸೆಯಲ್ಲಿ ಕಠಿಣ ಪರಿಶ್ರಮಪಟ್ಟು ವ್ಯಾಸಂಗ ಮಾಡುವ ಮೂಲಕ ಸಮಾಜದಲ್ಲಿ ಉತ್ತಮ ಸ್ಥಾನಗಳಿಸಬೇಕು ಎಂದು ಸಲಹೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಮಾನಸ ವಿದ್ಯಾಸಂಸ್ಥೆಯ ಅಧ್ಯಕ್ಷ ವಿ.ಕೆ.ಜಗದೀಶ್, ಕಾರ್ಯದರ್ಶಿ ಎಚ್.ಪಿ.ನಾಗರಾಜು, ಖಜಾಂಚಿ ವಿ.ಕೆ.ಸನತ್ಕುಮಾರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಜಿಲ್ಲಾ ಪ್ರಾಂಶುಪಾಲ ಸಂಘದ ಅಧ್ಯಕ್ಷ ಯು.ಎಸ್.ನಟರಾಜು, ಪ್ರಾಂಶುಪಾಲೆ ಗೀತಾಜೋಗಿಗೌಡ, ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ತಾಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಅಂಕೇಗೌಡ, ನಿವೃತ್ತ ಮುಖ್ಯ ಶಿಕ್ಷಕ ಕೃಷ್ಣಪ್ಪ ಇದ್ದರು.