ಮದ್ದೂರು
ಬೆಂಗಳೂರಿನ ಕಸಾಯಿಖಾನೆಗೆ ಆಕ್ರಮವಾಗಿ ಸಾಗಿಸುತ್ತಿದ್ದ 30ಕ್ಕೂ ಹೆಚ್ಚು ಜಾನುವಾರುಗಳನ್ನು ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ತಂಡ ರಕ್ಷಣೆ ಮಾಡಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದ ಬಳಿ 30ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಣೆ ಮಾಡಿದ ನಂತರ ಪುನೀತ್ ಕೆರೆಹಳ್ಳಿ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ ಪರಿಣಾಮ ತಕ್ಷಣವೇ ಸ್ಥಳಕ್ಕೆ ಪೊಲೀಸರು ಆಗಮಿಸಿ ವಾಹನದ ಚಾಲಕ ಮನ್ಸೂರು ಅಹಮ್ಮದ್, ಸಹಾಯಕ ಲೋಕೇಶ್ ಅವರನ್ನು ಪೊಲೀಸರು ವಶಕ್ಕೆ ಪಡೆದು ತೆಗೆದುಕೊಂಡಿದ್ದಾರೆ.
ಈಚರ್ ವಾಹನದಲ್ಲಿ ರಾಸುಗಳಿಗೆ ಯಾವುದೇ ರೀತಿಯಲ್ಲಿ ಗಾಳಿ, ಬೆಳಕು ಹಾಗೂ ಆಹಾರ ನೀಡಿದೆ ಹಿಂಸಾತ್ಮಕವಾಗಿ ಕಾನೂನು ಬಾಹಿರವಾಗಿ ಖಾಸಯಿಖಾನೆಗೆ ಮಾಂಸದ ಉದ್ದೇಶದಿಂದ 30ಕ್ಕೂ ಹೆಚ್ಚು ಗೋವುಗಳ ಸಾಗಾಟ ಮಾಡಲಾಗುತ್ತಿತ್ತು. ಇದರ ಖಚಿತ ಸುಳಿವು ದೊರೆತ ಪುನೀತ್ ಹಾಗೂ ತಂಡದವರು ಪಟ್ಟಣದ ಪ್ರವಾಸಿ ಮಂದಿರದ ಬಳಿ ವಾಹನ ತಡೆದು ಪರಿಶೀಲನೆ ನಡೆಸಿದ ವೇಳೆ ಈ ಘಟನೆ ಬೆಳಕಿಗೆ ಬಂದಿದ್ದು, ವಾಹನವನ್ನು ಪಟ್ಟಣದ ಪೋಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರಿನ ಕಸಾಯಿಖಾನೆಗೆ ಆಕ್ರಮವಾಗಿ ಸಾಗಿಸುತ್ತಿದ್ದ 30ಕ್ಕೂ ಹೆಚ್ಚು ಜಾನುವಾರುಗಳನ್ನು ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ತಂಡ ಮದ್ದೂರು ಪಟ್ಟಣದಲ್ಲಿ ರಕ್ಷಣೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.