ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್ ಆಕ್ರೋಶ
ಪ್ರತಿನಿಧಿ ವರದಿ ಹಾಸನ
ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಿರುವ ಕೀರ್ತಿ ಕಾಂಗ್ರೆಸ್ ಅಲ್ಲ ಜೆಡಿಎಸ್ಗೆ ಸಲ್ಲುತ್ತದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್ ಲಿಂಗೇಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಎತ್ತಿನಹೊಳೆ ಯೋಜನೆ ಯಶಸ್ವಿ ನಮ್ಮ ಸರ್ಕಾರದ ಸಾಧನೆ ಎಂದು ಹೇಳಿ ಕೊಳ್ಳುತ್ತಿದ್ದು, ಇದಕ್ಕೆ ನಮ್ಮ ವಿರೋಧ ಇದೆ. ಯೋಜನೆ ಕೇವಲ ಕಾಂಗ್ರೆಸ್ ಅವಧಿಯಲ್ಲಿ ಪ್ರಾರಂಭವಾಗಿದ್ದಷ್ಟೇ. ಆದರೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಕಾಮಗಾರಿ ಯಶಸ್ವಿಗೊಳಿಸಲು ಜೆಡಿಎಸ್ ಶ್ರಮ ಅಪಾರ ವಾಗಿದೆ ಎಂದರು.
ತಮ್ಮ ಸರ್ಕಾರ ಇರುತ್ತದೆಯೇ ಇಲ್ಲವೇ ಎಂಬ ತರಾತುರಿಯಲ್ಲಿ ಕಾಂಗ್ರೆಸ್ ಸರ್ಕಾರ ಮೊದಲ ಹಂತದಲ್ಲಿ ಪ್ರಾರಂಭ ಮಾಡಲು ಮುಂದಾಗಿದೆ. ಕಾರ್ಯಕ್ರಮಕ್ಕೆ ಇಡೀ ಸಚಿವ ಸಂಪುಟವೇ ಹಾಸನಕ್ಕೆ ಬರುತ್ತಿದ್ದು, ಕೇವಲ ತಮ್ಮ ಸರ್ಕಾರದ ಸಾಧನೆ ಎಂದು ಬಿಂಬಿಸಲು ಹೊರಟಿ ರುವುದು ಖಂಡನೀಯ ಎಂದರು.
ನಾವು ಶಾಸಕನಾಗಿದ್ದ ವೇಳೆ ಎತ್ತಿನಹೊಳೆ ಯೋಜನೆಗೆ ಜಾಗ ಬಿಟ್ಟುಕೊಡಲು ರೈತರ ವಿರೋಧ ಇದ್ದ ವೇಳೆ ಅವರ ಮನವೊಲಿಸಿ ಜಾಗ ಬಿಡಿಸಿ ಕೊಟ್ಟಿದ್ದೇವೆ. ಜತೆಗೆ ಕಾಮಗಾರಿಗೂ ಕೂಡ ಎಲ್ಲ ರೀತಿಯ ಸಹಕಾರ ನೀಡಿದ್ದೇವೆ. ಆದರೆ ಕಾರ್ಯಕ್ರಮಕ್ಕೆ ನಮ್ಮನ್ನು ಆಹ್ವಾನ ಮಾಡುವುದಾಗಲಿ ಅಥವಾ ಗೌರವಿ ಸುವುದಾಗಲಿ ಮಾಡಿಲ್ಲ. ಸರ್ಕಾರಿ ಕಾರ್ಯಕ್ರಮದಲ್ಲು ಕೂಡ ರಾಜಕಾರಣ ಮಾಡುತ್ತಿದೆ ಎಂದರು.
ಕಾಮಗಾರಿ ಈವರೆಗೆ ಪೂರ್ಣಗೊಂಡಿಲ್ಲ ಆದರೆ ಜನರ ಕಣ್ಣಿಗೆ ಮಣ್ಣೆರಚಿ ಕಾಮಗಾರಿ ಮುಕ್ತಾಯವಾಗಿದೆ ಎಂಬ ಭಾವನೆಯನ್ನು ಮೂಡಿಸುವ ಹುನ್ನಾರ ಮಾಡಿದೆ ಎಂದು ದೂರಿದರು.
ಮಾಜಿ ಶಾಸಕ ಎಚ್.ಕೆ.ಕುಮಾರಸ್ವಾಮಿ, ಮಂಜೇಗೌಡ, ದ್ಯಾವೇಗೌಡ, ರಘು ಹೊಂಗೆರೆ ಇದ್ದರು.