ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಿರುದ್ದ ಸ್ನೇಹಮಹಿ ಕೃಷ್ಣ ನೀಡಿದ್ದ ದೂರು ವಿಚಾರ ಪೋಲಿಸರು ಪ್ರಕರಣ ದಾಖಲಿಸದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ದ ಮೊಕದಮ್ಮೆ ದಾಖಲಿಸಲಾಗುವುದು ಎಂದು ಸ್ನೇಹಮಯಿ ಕೃಷ್ಣ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಆರ್ ಟಿ ಐ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಅಧಿಕಾರಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಿಎಂ ಪತ್ನಿ ಪಾರ್ವತಿ ಮತ್ತು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ದಾಖಲೆಗಳಲ್ಲಿ ಸಹಿಗಳನ್ನು ನಕಲು ಮಾಡಿದ್ದಾರೆಂದು ಆರೋಪಿಸಿ ಹಾಗೂ ಈ ವಿಚಾರವಾಗಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮೈಸೂರಿನ ಲಕ್ಷ್ಮೀ ಪುರಂ ಹಾಗೂ ದೇವರಾಜ ಪೋಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದರು. ಆದರೆ ನಾನು ದೂರು ನೀಡಿ ಹಲವು ದಿನಗಳಾಗಿದ್ದರೂ ಸಹ ದೂರಿನ ಸಂಬಂಧ ಪ್ರಕರಣ ದಾಖಲಿಸಿಲ್ಲ. ಸಾಕ್ಷಿಯಿರುವ ಲಕ್ಷ್ಮಣ್ ಅವರ ಮೊಬೈಲ್ ಕೂಡ ವಶಪಡಿಸಿಕೊಂಡಿಲ್ಲ. ಇದರಿಂದ ಸಾಕ್ಷ್ಯಾಧಾರ ನಾಶವಾಗುವ ಸಾಧ್ಯತೆಯಿದ್ದು, ಒಂದು ವೇಳೆ ಸಾಕ್ಷ್ಯಾಧಾರ ನಾಶವಾದರೆ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಹೀಗಾಗಿ ಪೊಲೀಸ್ ಕಮಿಷನರ್, ಎಸಿಪಿ, ಇನ್ಸ್ಪೆಕ್ಟರ್ ವಿರುದ್ದ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.