ವಾಲ್ಮೀಕಿ ಹಾಗೂ ಮುಡಾ ಹಗರಣದಿಂದ ರಾಜ್ಯ ಕಾಂಗ್ರೆಸ್ ಸರಕಾರ ಅಕ್ಷರಶಃ ಮುಜುಗರಕ್ಕೀಡಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಂಚ ಜಾಸ್ತಿನೇ ಡಿಸ್ಟರ್ಬ್ ಆಗಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಕೂಗು ಜೋರಾಗಿಯೇ ಕೇಳಿಬರುತ್ತಿದೆ.
ಸಿದ್ದರಾಮಯ್ಯ ಸಿಎಂ ಹುದ್ದೆಗೆ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಅಂತ ಜಾರಕಿಹೊಳಿ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರು ಮಾಡಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಜಾರಕಿಹೊಳಿ ಸಿಎಂ ಆಗಲಿ. ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂಬ ಪೋಸ್ಟರ್ಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಗ್ರೂಪ್ ಕೂಡ ಕ್ರಿಯೆಟ್ ಮಾಡಲಾಗಿದೆ.
ಅಭಿಮಾನಿಗಳ ಪೋಸ್ಟ್ ಎಲ್ಲಾ ಕಡೆ ವೈರಲ್ ಆಗುತ್ತಿದೆ. ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದರು. ಅದಾದ ಬಳಿಕ, ಮುಂದಿನ ಸಿಎಂ ಜಾರಕಿಹೊಳಿ ಎಂಬ ಕೂಗು ಹೆಚ್ಚಾಗಿದೆ.ಬೆಂಗಳೂರಿನಲ್ಲಿ ಹಲವು ಮುಖಂಡರ ಜೊತೆಗೆ ಜಾರಕಿಹೊಳಿ ನಿಕಟ ಸಂಪರ್ಕ ಹೊಂದಿದ್ದಾರೆ ಹೀಗಾಗಿಯೇ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬ ಮಾತುಗಳು ಹೆಚ್ಚಾಗಿ ಕೇಳಿಬರುತ್ತಿದೆ. ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗಲು ತೆರೆಮರೆಯಲ್ಲಿ ಭಾರೀ ಕಸರತ್ತು ನಡೆಸುತ್ತಿದ್ದಾರೆ . ದೆಹಲಿಗೆ ಪದೇಪದೇ ಭೇಟಿ ನೀಡುತ್ತಿದ್ದು, ಕೈ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ತಮ ಅಭಿಲಾಷೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇದು ಅವರ ಬೆಂಬಲಿಗರಲ್ಲಿ ಮತ್ತಷ್ಟು ಭರವಸೆಗಳನ್ನು ಹುಟ್ಟುಹಾಕಿವೆ. ಇದಕ್ಕೆ ಪೂರಕ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಂದೇಶಗಳು ಹರಿದಾಡುತ್ತಿದೆ.