ಎಚ್ ಡಿ ಕೋಟೆ: ಮನೆಯ ಸಂಪ್ ನಲ್ಲಿದ್ದ ಮೋಟರ್ ಗೆ ವಿದ್ಯುತ್ ಸಂಪರ್ಕ ಕೊಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಗುಲಿ 21 ವರ್ಷದ ಯುವಕ ಸಾವಿಗೀಡಾಗಿರುವ ಘಟನೆ ಎಚ್ ಡಿ ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ.
ಮೊತ್ತ ಗ್ರಾಮದ ಗುರುಸ್ವಾಮಿ ಮತ್ತು ದೇವಮಣಿ ದಂಪತಿಯ ಪುತ್ರ ರವೀಶ್ ಎಂಬಾತನೇ, ಸಾವಿಗೀಡಾದ ಮೃತ ದುರ್ದೈವಿಯಾಗಿದ್ದಾನೆ.
ಮೃತ ರವೀಶ್ ಜೀವನೋಪಾಯಕ್ಕಾಗಿ ಗೂಡ್ಸ್ ಆಟೋ ಓಡಿಸುತ್ತಿದ್ದ. ಹೆತ್ತವರು ಕೂಡ ಈತನನ್ನೇ ನಂಬಿಕೊಂಡಿದ್ಧು, ಹೊಸ ಮನೆ ಕಾಮಗಾರಿ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಮೋಟಾರ್ ಆನ್ ಮಾಡುವಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಕೂಡಲೆ ಸ್ಥಳೀಯರು ರವೀಶ್ ನನ್ನು ಎಚ್ ಡಿ ಕೋಟೆ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದರಾದರೂ ಅಷ್ಟರಲ್ಲಿ ಪ್ರಾಣಪಕ್ಷಿ ಹಾರಿಹೋಗಿತ್ತು. ನಂತರ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಎದೆಯೆತ್ತರಕ್ಕೆ ಬೆಳೆದ ಮಗನನ್ನು ಕಳೆದುಕೊಂಡ ಪೋಷಕರು ದಿಕ್ಕು ತೋಚದಂತಾಗಿ ಕಣ್ಣೀರಿಡುತ್ತಿದ್ದರೆ, ಇತ್ತ ಸಂಬಂಧಿಕರು ಮತ್ತು ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿತ್ತು,