ಚಾಮುಂಡಿ ಬೆಟ್ಟದ ಪ್ರಾಧಿಕಾರ ವಿಚಾರ ಸದ್ಯ ಪ್ರಮುಖ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಪ್ರಾಧಿಕಾರ ರಚನೆ ಕುರಿತ ಸರ್ಕಾರದ ನಿರ್ಧಾರಕ್ಕೆ ರಾಜಮನೆತನದ ವಿರೋಧ ಇದೆ. ರಾಜಕೀಯವಾಗೂ ಪರ ವಿರೋಧ ಚರ್ಚೆ ಆಗ್ತಿದೆ. ಸ್ವತಃ MP ಯದುವೀರ್ ಒಡೆಯರ್ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.
ಹೆಸರು ಹೇಳದೇ ಹಾಲಿ ಸಂಸದರಿಗೆ ಮಾಜಿ ಸಂಸದ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯರನ್ನು ಕೆಲವು ಸೈಂದಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಚಾಮುಂಡಿಬೆಟ್ಟ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಪ್ರಾಧಿಕಾರದ ಅವಶ್ಯಕತೆ ಇದೆ. ಚಾಮುಂಡಿಬೆಟ್ಟಕ್ಕೆ ಪೋಲಿಸ್ ಠಾಣೆ ಹಾಗೂ ಆಸ್ಪತ್ರೆ ಬೇಕು.ಇದೆಲ್ಲಾ ಆಗಲು ಒಂದು ಪ್ರಾಧಿಕಾರ ಬೇಕೇ ಬೇಕು.ಈ ಹಿಂದೆ ಬಿಜೆಪಿ ಸರ್ಕಾರದಲ್ಲೂ ಪ್ರಾಧಿಕಾರ ಬೇಕೆಂದು ಧ್ವನಿ ಎತ್ತಿದ್ದೆವು. ಸಿದ್ದರಾಮಯ್ಯನವರು ಪ್ರಾಧಿಕಾರ ರಚನೆ ಮಾಡಿದ್ದಾರೆ ಖಂಡಿತ ಇದು ಒಳ್ಳೆಯ ಕೆಲಸ ಎಂದಿದ್ದಾರೆ.
ಆಸ್ತಿ ಹೊಡೆದಾಟದ ಬಗ್ಗೆ ಮಾತನಾಡುವುದಿಲ್ಲ.ಆದರೆ ದೇವರು ಭಕ್ತರಿಗೆ ಸೇರಬೇಕು.ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾಗಿದ್ದು ಸರ್ಕಾರದ ಕರ್ತವ್ಯವಾಗಿದೆ. ಅಮೃತ್ ಯೋಜನೆ ಕುಡಿಯುವ ನೀರು ಬೆಟ್ಟಕ್ಕೆ ತಲುಪದಿರಲು ಕಾರಣ ಯಾರು.?ನಾನು ಹೇಳಿದ್ರೆ ಕಾಂಟ್ರವರ್ಸಿ ಆಗುತ್ತದೆ. ಪೈಪ್ಲೈನ್ ಎಲ್ಲಿ ತಡೆದು ನಿಂತಿದೆ ನೀವೆ ಹೋಗಿ ಹುಡುಕಿಕೊಳ್ಳಿ ಅಂತ ಪರೋಕ್ಷವಾಗಿ ಹೆಸರು ಹೇಳದೇ ಸಂಸದ ಯದುವೀರ್ ಒಡೆಯರ್ ಗೆ ಪ್ರತಾಪ್ ಸಿಂಹ ಕೌಂಟರ್ ಕೊಟ್ಟಿದ್ದಾರೆ.