ಮೈಸೂರು: ಡಿ.ಸಿ. ಹಾಸ್ಟೆಲ್ ಹಳೆಯ ವಿದ್ಯಾರ್ಥಿಗಳ ಗೆಳೆಯರ ಒಕ್ಕೂಟದ ಉದ್ಘಾಟನಾ ಸಮಾರಂಭ ಸೆ. 16ರಂದು ನಡೆಯಲಿದೆ.
ನಗರದ ನಜರ್ ಬಾದ್ ಮುರುಗಾದೇವಿ ದೇವಸ್ಥಾನದ ಹತ್ತಿರವಿರುವ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿರುವ ಸಮಾರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಿ.ರಂಗೇಗೌಡ ಒಕ್ಕೂಟದ ಉದ್ಘಾಟನೆಯನ್ನು ನೆರವೇರಿಸುವರು. ಮಾಜಿ ಮೇಯರ್ ಪುರುಷೋತ್ತಮ ಅವರು ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದು, ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಹಾಗೂ ಒಕ್ಕೂಟದ ಗೌರವಾಧ್ಯಕ್ಷ ಕೆ.ಎಂ.ಸುರೇಶ್ ಕುಮಾರ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಭಾಷಣಕಾರರಾಗಿ ಮೈಸೂರು ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕ ಪ್ರೊ.ಡಿ.ಆನಂದ್ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಆರ್.ಎಚ್.ಶರಣಪ್ಪ, ನಿವೃತ್ತ ನಿಲಯಪಾಲಕ ಹಾಗೂ ಒಕ್ಕೂಟದ ಗೌರವ ಸಲಹೆಗಾರ ಎಂ.ಶಿವಣ್ಣ, ಚಲನಚಿತ್ರ ನಿರ್ದೇಶಕ ಹಾಗೂ ಹಾಸ್ಟೆಲ್ ನ ಹಳೆಯ ವಿದ್ಯಾರ್ಥಿ ಎಸ್.ಮಹೇಂದರ್, ಮೈಸೂರು ವಿಶ್ವವಿದ್ಯಾಲಯ ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ.ಸಿ.ಗುರುಸಿದ್ದಯ್ಯ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗು, ನಜರ್ ಬಾದ್ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಎಂ. ಮಹದೇವಸ್ವಾಮಿ, ಹಿರಿಯ ನಿಲಯಪಾಲಕ ಎನ್.ಬಿ.ಮಹೇಶ್, ಕಿರಿಯ ನಿಲಯಪಾಲಕ ಎಸ್.ಪಿ. ಸೋಮಣ್ಣ ಉಪಸ್ಥಿತರಿರುವರು.
ಹಾಸ್ಟೆಲ್ ನ ಎಲ್ಲ ಹಳೆಯ ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸುವಂತೆ ಒಕ್ಕೂಟದ ಕಾರ್ಯಕಾರಿ ಮಂಡಳಿ ಪ್ರಕಟಣೆಯಲ್ಲಿ ಕೋರಿದೆ.