– ಪಿ.ಆರ್. ತಿಪ್ಪೇಸ್ವಾಮಿ ಜನ್ಮಶತಮಾನೋತ್ಸವದ ಸಮಾರೋಪ
ಮೈಸೂರು:
ಪಿ.ಆರ್. ತಿಪ್ಪೇಸ್ವಾಮಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಲಲಿತಕಲಾ, ಶಿಲ್ಪಕಲಾ, ಜಾನಪದ ಅಕಾಡಮಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರ, ಕಲಾನಿಕೇತನ ಸ್ಕೂಲ್ ಆಫ್ ಆರ್ಟ್, ಕದಂಬ ರಂಗ ವೇದಿಕೆ, ಚಿತ್ರವನ ರೆಸಾರ್ಟ್ ಹಾಗೂ ರಾಮ್ಸನ್ಸ್ ಕಲಾ ಪ್ರತಿಷ್ಠಾನಗಳ ಸಹಯೋಗದಲ್ಲಿ ಪಿ.ಆರ್. ತಿಪ್ಪೇಸ್ವಾಮಿ ಜನ್ಮಶತಮಾನೋತ್ಸವದ ಸಮಾರೋಪ ಸಮಾರಂಭದ ಅಂಗವಾಗಿ ಸೆ.18ರಿಂದ 20ರವರೆಗೆ ಚಿತ್ರಕಲಾ ಪ್ರದರ್ಶನ, ಸ್ಪರ್ಧೆ, ಪ್ರಾತ್ಯಕ್ಷಿಕೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.
ವಿಜಯನಗರ 2ನೇ ಹಂತದಲ್ಲಿರುವ ಶ್ರೀ ಕಲಾನಿಕೇತನ ಸ್ಕೂಲ್ ಆಫ್ ಆರ್ಟ್ನಲ್ಲಿ ಮೂರು ದಿನಗಳ ಸಮಾರಂಭ ನಡೆಯಲಿದ್ದು, ಸೆ.18ರಂದು ಬೆಳಗ್ಗೆ 11ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಹಿರಿಯ ಕಲಾವಿದ ಬಿ.ಪಿ. ರಾಮಕೃಷ್ಣ, ಕಲಾನಿಕೇತನ ಸ್ಕೂಲ್ ಆಫ್ ಆರ್ಟ್ ಕಾರ್ಯದರ್ಶಿ ಬಾಬುರಾವ್, ಶಿಲ್ಪ ಕಲಾವಿದ ವಿಶ್ವಕರ್ಮ ಆಚಾರ್ಯ, ವೀರಶ್ ಮೈಸೂರು ಜಗದೀಶ್, ಸಯದ್ ಆಸೀಫ್ ಅಲಿ ಅವರುಗಳು ಭಾಗವಹಿಸಲಿದ್ದಾರೆ.
ಸೆ.19ರಂದು ಬೆ.11ಕ್ಕೆ ನಡೆಯುವ ಚಿತ್ರಕಲಾ ಸ್ಪರ್ಧೆ ಮತ್ತು ಪ್ರಾತ್ಯಕ್ಷಿಕೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರೊ.ಕೆ.ಎನ್. ಲೋಕನಾಥ್, ಡಾ. ಸುದರ್ಶನ್, ಸಿ. ಚಿಕ್ಕಣ್ಣ ಅವರುಗಳು ಪಾಲ್ಗೊಳ್ಳಲಿದ್ದಾರೆ. ಸೆ.20ರಂದು ಸಂಜೆ 4ಕ್ಕೆ ನಡೆಯುವ ಸಮಾರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡು ಸಮಾರಂಭ ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇವರೊಂದಿಗೆ ಸಚಿವ ಎಚ್.ಸಿ. ಮಹದೇವಪ್ಪ, ಪುರುಷೋತ್ತಮ ಬಿಳಿಮಲೆ, ಶಾಸಕ ಕೆ. ಹರೀಶ್ ಗೌಡ, ಎಚ್.ಎಂ. ರೇವಣ್ಣ ಇತರರು ಭಾಗವಹಿಸಲಿದ್ದಾರೆ.
================
ಫೋಟೋ ಇಲ್ಲ