ಮುಡಾ ಹಗರಣದ ವಿಚಾರದಲ್ಲಿ ರಾಜ್ಯ ಸರ್ಕಾರದ ನಡವಳಿಕೆ ಸಂಶಯಕ್ಕೆಡೆ ಮಾಡಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.
ಮುಡಾ ಹಗರಣದಲ್ಲಿ ಭಾಗಿಯಾಗಿರುವ ಆರೋಪಕ್ಕೆ ಗುರಿಯಾಗಿರುವ ಅಧಿಕಾರಿ ಮಂಜುನಾಥ್ ಸೇರಿದಂತೆ ಹಲವ ವಿರುದ್ಧ ಇತ್ತೀಚೆಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದೆ. ಈ ಹಿನ್ನೆಲೆಯಲ್ಲಿ ಮಂಜುನಾಥ್ ಅನ್ನು ವರ್ಗಾವಣೆ ಮಾಡಲಾಗಿದೆ. ಆದರೆ ತಪ್ಪಿತಸ್ಥ ಅಧಿಕಾರಿಗಳಿಗೆ ವರ್ಗಾವಣೆ ಶಿಕ್ಷೆಯಲ್ಲ. ತಪ್ಪು ಮಾಡಿದ್ದರೆ ಅಮಾನತು ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. ಸರ್ಕಾರವೇ ಅಧಿಕಾರಿಯನ್ನು ಅಮಾನತು ಮಾಡಿ, ವಾಪಸ್ ಪಡೆದಿರುವ ಆದೇಶ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ದಿನೇಶ್ ಕುಮಾರ್ ಅಮಾನತು ಆದೇಶ ವಾಪಸ್ ಪ್ರತಿ ನಿನ್ನೆ ಇಡೀ ದಿನ ಪ್ರಯತ್ನಿಸಿದರೂ ಸಿಕ್ಕಿಲ್ಲ.
ರಾಜ್ಯ ಸರ್ಕಾರದ ನಡವಳಿಕೆ ಸಂಶಯಕ್ಕೆಡೆ ಮಾಡಿದೆ. ರಾಜ್ಯ ಸರ್ಕಾರದ ಮೇಲೆ ಅಧಿಕಾರಿಗಳೇ ಹಿಡಿತ ಹೊಂದಿದ್ದಾರೆ. ಅದರಲ್ಲೂ ನಗರಾಭಿವೃದ್ಧಿ ಇಲಾಖೆಯ ಮೇಲೆ ಅಧಿಕಾರಿಗಳು ಸಂಪೂರ್ಣ ಹಿಡಿತ ಹೊಂದಿದ್ದಾರೆ. ಈ ಬಗ್ಗೆ ಮಂಗಳವಾರ ರಾಜ್ಯಪಾಲರು ಹಾಗು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡುತ್ತೇನೆ. ಮುಡಾ ಹಗರಣ ಸಂಬಂಧ ನಡೆಸುತ್ತಿರುವ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದಿದ್ದಾರೆ.
ಇನ್ನು ನಾಗಮಂಗಲ ಗಲಭೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾಮಂಗಲ ಗಲಭೆ ಪೂರ್ವ ನಿಯೋಜಿತ ಕೃತ್ಯ ಗಣಪತಿ ಕೂರಿಸಿದವರನ್ನು A1 ಆರೋಪಿ ಮಾಡಲಾಗಿದೆ ತಪ್ಪನ್ನು ಸರ್ಕಾರವೇ ಒಪ್ಪಿಕೊಂಡಿದೆ. ಏಕಾಏಕಿ ಪೆಟ್ರೋಲ್ ಬಾಂಬ್, ತಲ್ವಾರ್ ಗಳು ಹೇಗೆ ಬಂದವು? ಇದು ಪೂರ್ವನಿಯೋಜಿತ ಕೃತ್ಯವಾಗಿದೆ. ತಪ್ಪು ಮಾಡಿರುವವರನ್ನು ಯಾವುದೇ ಕಾರಣಕ್ಕೂ ಬಿಡಬಾರದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮಸೀದಿ ಮುಂದೆ ಗಣಪತಿ ಮೆರವಣಿಗೆ ಹೋಗಬಾರದು ಎಂದರೆ ಹೇಗೆ? ಮೆರವಣಿಗೆ ಎಲ್ಲೆಡೆಯೂ ಸಾಗುವಂತಾಗಬೇಕು.
ಇದೀಗ ಈದ್ ಮಿಲಾದ್ ದಿನ ಗಣೇಶ ವಿಸರ್ಜನೆ ಮಾಡಬೇಡಿ ಎನ್ನುತ್ತಿದ್ದಾರೆ ಆದರೆ ಈದ್ ಮಿಲಾದ್ ಗೂ ಗಣಪತಿ ವಿಸರ್ಜನೆಗೂ ಏನು ಸಂಬಂಧ? ಎಂದು ಪ್ರಶ್ನಿಸಿದ್ದಾರೆ.
ರಾಜ್ಯ ಸರ್ಕಾರ ಶಾಸಕರ ಕ್ಷೇತ್ರಾಭಿವೃದ್ದಿಗೆ ಸಮರ್ಪಕವಾಗಿ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದಿರುವ ಇವರು ರಾಜ್ಯ ಸರ್ಕಾರ ಇತ್ತೀಚೆಗೆ ಕೆ ಆರ್ ಕ್ಷೇತ್ರಕ್ಕೆ ಎರಡು ಕೋಟಿ ಅನುದಾನ ಬಿಡುಗಡೆ ಮಾಡಿದೆ. ಬಿಜೆಪಿ ಮೇಯರ್ ಇದ್ದ ಅವಧಿಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಪ್ರತಿಯೊಂದು ವಾರ್ಡಿಗೂ ತಲಾ ಒಂದೂವರೆ ಕೋಟಿ ಅನುದಾನ ನೀಡಲಾಗಿತ್ತು. ಕೆ ಆರ್ ಕ್ಷೇತ್ರದ ಯುಜಿಡಿ ಕಾಮಗಾರಿಗೆ 100 ರಿಂದ 150 ಕೋಟಿ ಅಗತ್ಯವಿದೆ ಎಂದಿದ್ದಾರೆ.