ಮೈಸೂರು: ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಜೆಡಿಎಸ್ ಯುವ ಘಟಕದ ರಾಜಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಜೆಡಿಎಸ್ ಸಂಘಟನೆಯ ಕಾರ್ಯಕ್ರಮದ ಹಿನ್ನಲೆ ಮೈಸೂರಿಗೆ ಆಗಮಿಸಿರುವ ಇವರು, ಇದೇ ವೇಳೆ ನಾಡ ಅದಿ ದೇವತೆಯ ದರ್ಶನ ಪಡೆದು, ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿಗೆ ಶಾಸಕ ಸುರೇಶ್ ಬಾಬು, ಮಾಜಿ ಶಾಸಕ ಅನ್ನದಾನಿ, ಎಂಎಲ್ ಸಿ ಮಂಜೇಗೌಡ ಸೇರಿದಂತೆ ಸ್ಥಳೀಯ ಜೆಡಿಎಸ್ ಮುಖಂಡರು ಈ ವೇಳೆ ಸಾಥ್ ನೀಡಿದ್ದಾರೆ.