ನಾಗಮಂಗಲದ ಕೋಮು ಸಂಘರ್ಷ ಪ್ರಕರಣ ಸಂಬಂಧ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ FIR ದಾಖಲಿಸಲಾಗಿದೆ. ಘಟನೆ ಸಂಬಂಧ ತಪ್ಪು ಸಂದೇಶ ರವಾನೆ ಮಾಡಿರುವ ಆರೋಪದಡಿಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪೋಲಿಸರು FIR ದಾಖಲಿಸಿದ್ದಾರೆ.
ಮಂಡ್ಯದ ನಾಗಮಂಗಲ ಟೌನ್ ಠಾಣೆಯಲ್ಲಿ FIR ದಾಖಲಾಗಿದ್ದು, ಬೇರೆ ಕಡೆ ನಡೆದ ಪ್ರಕರಣವನ್ನು ನಾಗಮಂಗಲದಲ್ಲಿ ನಡೆದಿದ್ದು ಎಂದು ಬಿಂಬಿಸಿ ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ಹಂಚಿ ಸಮಾಜದ ಸ್ವಾಸ್ಥ್ಯ ಕದಡುತ್ತಿದ್ದಾರೆ ಹಾಗೂ ದೊಂಬಿ, ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆಂಬ ಆರೋಪದಡಿ ಕೇಸ್ ದಾಖಲಿಸಲಾಗಿದೆ. ಸದ್ಯ ಇಬ್ಬರ ವಿರುದ್ಧವೂ THE BHARATIYA NYAYA SANHITA (BNS), 2023 (U/s-192) ಅಡಿ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರ ವಿರುದ್ಧವೂ ಎರಡು ಪ್ರತ್ಯೇಕ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ.