ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಸಂಘರ್ಷ ಮುಂದುವರಿದಿದೆ. ತಾಲೂಕಿನ ಆವರ್ತಿ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಜೋರು ಗಲಾಟೆ ನಡೆದಿದ್ದು , ವಾರ್ಷಿಕ ಮಹಾಸಭೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಜಗಳವೇ ನಡೆದುಹೋಗಿದೆ.
ಗಲಾಟೆಯಿಂದ ಸ್ಥಳದಲ್ಲಿ ಕೆಲಕಾಲ ಪರಿಸ್ಥಿತಿ ಬಿಗುಡಾಯಿಸಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದರು. ಸಭೆಯ ಆರಂಭದಿಂದಲೂ ಒಂದೆಲ್ಲಾ ಒಂದು ವಿಚಾರಕ್ಕೆ ಪರಸ್ಪರ ಕಾರ್ಯಕರ್ತರು ಬೈದಾಡಿಕೊಂಡರು. ಗಲಾಟೆ ಕೂಡ ಜೋರಾಗಿತ್ತು. ನೋಡನೋಡ್ತಿದ್ದಂತೆ ಗಲಾಟೆ ಮತ್ತಷ್ಟು ಹೆಚ್ಚಾಗಿ ಎರಡು ಗುಂಪುಗಳ ಸದಸ್ಯರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದಾರೆ. ನಂತರ ಪೊಲೀಸರು ಹಾಗೂ ಹಿರಿಯರ ಮಧ್ಯ ಪ್ರವೇಶದಿಂದ ಎಲ್ಲವೂ ತಿಳಿಯಾಗಿದೆ.