ಬಹುಬೇಡಿಕೆಯ ತಿರುಪತಿ ಲಡ್ಡು ಮತ್ತೆ ಸುದ್ದಿಯ ಮುನ್ನೆಲೆಗೆ ಬಂದಿದೆ. ಆಂಧ್ರ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹೇಳಿಕೆ ಅದಕ್ಕೆ ಕಾರಣ. ಜಗನ್ ಆಳ್ವಿಕೆಯಲ್ಲಿ ತಿರುಪತಿ ಲಡ್ಡು ತಯಾರಿಗೆ ಪ್ರಾಣಿ ಕೊಬ್ಬು ಬಳಸ್ತಾ ಇದ್ರು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ. ಇದು ರಾಜಕೀಯ ಸಂಚಲನ ಮೂಡಿಸಿದೆ.ಹಿಂದಿನ ಆಡಳಿತದ ಅವಧಿಯಲ್ಲಿ ತಿರುಮಲ ಲಡ್ಡು ಗುಣಮಟ್ಟ ಕಳಪೆಯಾಗಿತ್ತು ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ನಾಯ್ಡು ಅದನ್ನು ಅಪವಿತ್ರ ಎಂದು ಬಣ್ಣಿಸಿದರು. ಮುಖ್ಯಮಂತ್ರಿ ನಾಯ್ಡು ಅವರ ಆರೋಪ ರಾಜಕೀಯ ಸಂಚಲನ ಸೃಷ್ಟಿಸಿದ್ದು, ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ.
ತಿರುಮಲದಲ್ಲಿ ಅನ್ನ ಪ್ರಸಾದವಾಗಿ ಭಕ್ತರಿಗೆ ಕಳಪೆ ಆಹಾರವನ್ನು ನೀಡಿದ್ದಲ್ಲದೆ, ವೆಂಕಟೇಶ್ವರನಿಗೆ ಅರ್ಪಿಸುವ ಪ್ರಸಾದವನ್ನು ತಯಾರಿಸಲು ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಸಿದರು. ಶುದ್ಧ ತುಪ್ಪ ಬಳಸುವ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿದ್ದಾರೆ’ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದರು.ಇಂದು ನಾವು ಪರಿಶುದ್ಧ ತುಪ್ಪವನ್ನು ಬಳಸುತ್ತಿದ್ದೇವೆ. ದೇವಾಲಯದ ವ್ಯವಸ್ಥೆಯನ್ನು ಶುದ್ಧೀಕರಿಸಿದ್ದೇವೆ. ಪ್ರಸಾದ ಮತ್ತು ಆಹಾರದ ಗುಣಮಟ್ಟ ಸುಧಾರಿಸಿದೆ. ಅದೇ ರೀತಿ ಮತ್ತಷ್ಟು ಸುಧಾರಣೆಗಳನ್ನು ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ನಾಯ್ಡು ವಿವರಿಸಿದರು.