ಮೈಸೂರು ಜಿಲ್ಲೆಯಲ್ಲಿ TVS ಮೊಪೆಡ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಕಾರಣ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದೆ. ಟಿ ನರಸೀಪುರ ತಾಲ್ಲೂಕಿನ ಸಂತೆಮಾಳದ ಬಳಿ ಘಟನೆ ನಡೆದಿದ್ದು, ಕರುಹಟ್ಟಿಯ ಮಹದೇವಪ್ಪ ಎಂಬುವವರಿಗೆ ಗಂಭೀರ ಗಾಯವಾಗಿದೆ.
ಅಫಘಾತದ ನಂತರ ಲಾರಿ ಚಾಲಕನನ್ನು ಹಿಡಿದು ಪೊಲೀಸರಿಗೆ ಸ್ಥಳೀಯರು ಒಪ್ಪಿಸಿದ್ದಾರೆ.ಗಾಯಾಳು ಮಹದೇವಪ್ಪ ಅವರಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.