ಮೈಸೂರು: ನಮ್ಮ ತಂದೆಯ ಮೇಲೆ ಮಾಡುತ್ತಿರುವ ಎಲ್ಲಾ ಆರೋಪಗಳು ಬೋಗಸ್. ಇಡೀ ವಿಶ್ವದಲ್ಲೇ ಜನರ ಖಾತೆಗಳಿಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು. ಇಂತಹ ಯೋಜನೆಗಳನ್ನು ಸಹಿಸಿಕೊಳ್ಳಲು ಆಗದೆ ವಿನಾಕರಣ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮೈಸೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ ಹೇಳಿದ್ದಾರೆ.
ಮುಡಾ ಅನುದಾನ ಬಳಕೆ ಮಾಡುವುದರಲ್ಲಿ ಯಾವ ತಪ್ಪುಗಳು ಆಗಿಲ್ಲ.ಮುಡಾ ವ್ಯಾಪ್ತಿಯ ಪ್ರದೇಶಗಳ ಅಭಿವೃದ್ಧಿಗೆ ಮಾತ್ರ ಮುಡಾ ಹಣ ಬಳಕೆಯಾಗಿದೆ ಅದರಲ್ಲಿ ತಪ್ಪೇನಿದೆ ಹೇಳಿ.? ಎಂದು ಪ್ರಶ್ನಿಸಿರುವ ಇವರು ಮುಡಾ ಹಣ ಇರುವುದೇ ಜನರ ಒಳತಿಗೆ ಬಳಸುವುದಕ್ಕೆ. ಎಲ್ಲದಕ್ಕೂ ಸುಖಾಸುಮ್ಮನೆ ಆರೋಪಮಾಡುತ್ತಾ ಹೋದರೆ ಹೇಗೆ ಹೇಳಿ. ಸರ್ಕಾರದ ವಿರುದ್ಧ ಮಾತನಾಡಲು ಯಾರಿಗೂ ಯಾವ ವಿಚಾರಗಳು ಸಿಗುತ್ತಿಲ್ಲ. ಹೀಗಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಅಷ್ಟೇ. ನಮ್ಮ ತಂದೆಯ ಮೇಲೆ ಮಾಡುತ್ತಿರುವ ಎಲ್ಲಾ ಆರೋಪಗಳು ಬೋಗಸ್. ಇಡೀ ವಿಶ್ವದಲ್ಲೇ ಜನರ ಖಾತೆಗಳಿಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು. ಇಂತಹ ಯೋಜನೆಗಳನ್ನು ಸಹಿಸಿಕೊಳ್ಳಲು ಆಗದೆ ವಿನಾಕರಣ ಆರೋಪಗಳನ್ನು ಮಾಡಿ, ನಮ್ಮ ತಂದೆಯ ರಾಜೀನಾಮೆಯನ್ನು ಸುಖಾ ಸುಮ್ಮನೆ ಕೇಳುತ್ತಿದ್ದಾರೆ. ನಮ್ಮ ತಂದೆ ಯಾಕೆ ರಾಜೀನಾಮೆ ಕೊಡಬೇಕು.?
ಹೀಗೆ ಸಿಕ್ಕ ಸಿಕ್ಕ ಆರೋಪಗಳಿಗೆಲ್ಲಾ ರಾಜೀನಾಮೆ ಕೊಡುತ್ತಾ ಹೋದರೆ ಅದರಲ್ಲಿ ಅರ್ಥ ಇದೆಯಾ ಎಂದು ವಿಪಕ್ಷಗಳ ಆರೋಪಗಳಿಗೆ ಸಮರ್ಥನೆ ನೀಡಿದ್ದಾರೆ.