ಪ್ರತಿನಿಧಿ ವರದಿ ಗೋಣಿಕೊಪ್ಪ
ಕೊಡಗು ಜಿಲ್ಲೆಯಲ್ಲಿ ಭಾರತ್ ಜೈಭೀಮ್ ಸೇನೆ ಅಸ್ಥಿತ್ವಕ್ಕೆ ತರಲಾಗಿದ್ದು, ದಲಿತ ಪರ ಹೋರಾಟದಲ್ಲಿ ತೊಡಗಿಕೊಳ್ಳಲಾಗುವುದು ಎಂದು ಭಾರತ್ ಜೈಭೀಮ್ ಸೇನೆ ರಾಜ್ಯಾಧ್ಯಕ್ಷ ದಿನೇಶ್ ಹೇಳಿದರು.
ಸಿಲ್ವರ್ ಸ್ಕೈ ಸಭಾಂಗಣದಲ್ಲಿ ಆಯೋಜಿಸಿದ್ದ ಆಯ್ಕೆ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾಧ್ಯಕ್ಷ ಶಶಿಕುಮಾರ್, ವಿರಾಜಪೇಟೆ ತಾಲೂಕು ಅಧ್ಯಕ್ಷರಾಗಿ ಸಿದ್ದರಾಜು, ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಜೆ.ಯೋಗೇಶ್, ಉಪಾಧ್ಯಕ್ಷರಾಗಿ ಮಂಜು ಅವರನ್ನು ಅವರುಗಳಿಗೆ ಆಯ್ಕೆ ಪತ್ರ ವಿತರಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ದಲಿತರ ಹೆಸರಿನ ಇನ್ಷಿಯಲ್ ಆಗಿ ಎಚ್ ಅಕ್ಷರ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಕೆಗೆ ಮನವಿ ಮಾಡಿಕೊಳ್ಳಲಾಗುವುದು. ಹರಿಜನ ಬಳಕೆಯನ್ನು ಬಳಕೆ ಮಾಡದಂತೆ ಸರ್ಕಾರ ಕ್ರಮಕೈಗೊಳ್ಳಬೇಕು. ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ ನಿವೇಶನ ಕಲ್ಪಿಸಲು ಹೋರಾಟ ಮುಂದುವರಿಸಲಾಗುವುದು. ಶಿಕ್ಷಣ ವಂಚಿತರಿಗೆ ಶಿಕ್ಷಣಕ್ಕೂ ಪ್ರೋತ್ಸಾಹ ನೀಡಲಾಗುವುದು ಎಂದು ತಿಳಿಸಿದರು.
ಜಾತಿ ನಿಂದನೆ, ಕೊಲೆ ಬೆದರಿಕೆ ಆರೋಪದಲ್ಲಿ ಶಾಸಕ ಮುನಿರತ್ನ ಅವರ ವಿರುದ್ದ ಪೊಲೀಸ್ ಇಲಾಖೆ ಕ್ರಮಕೈಗೊಂಡಿರುವುದು ಸ್ವಾಗತಾರ್ಹ. ಅವರ ಶಾಸಕ ಅನರ್ಹಗೊಳಿಸಬೇಕು ಎಂದು ಒತ್ತಾಯಿಸಲಾಗುವುದು. ತಮಟೆ ಚಳುವಳಿಗೂ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಜಿಲ್ಲಾ ಉಸ್ತುವಾರಿ ಎಲ್. ಕೃಷ್ಣ, ರಾಜ್ಯ ಯುವ ಘಟಕ ಅಧ್ಯಕ್ಷ ಶಿಶಿಲ್, ಮಹಿಳಾ ಅಧ್ಯಕ್ಷೆ ವಿಜಯಲಕ್ಷ್ಮಿ, ಮಹಿಳಾ ಪ್ರಮುಖರಾದ ವಿಜಯಲಕ್ಷ್ಮಿ, ಉಸ್ತುವಾರಿ ಸವಿತಾ, ಯುವ ಘಟಕ ಉಪಾಧ್ಯಕ್ಷ ಮುಂಜುನಾಥ್, ಉಪಾಧ್ಯಕ್ಷ ದಿನೇಶ್, ಪ್ರ. ಕಾರ್ಯದರ್ಶಿ ಯೋಗೇಶ್ ಇದ್ದರು.
ಫೋಟೋ : 20 ಜಿ.ಕೆ.ಎಲ್ 08 : ಭಾರತ್ ಜೈಭೀಮ್ ಸೇನೆ ಜಿಲ್ಲಾಧ್ಯಕ್ಷ ಶಶಿಕುಮಾರ್, ಅವರಿಗೆ ಆಯ್ಕೆ ಪತ್ರ ಹಸ್ತಾಂತರ ಮಾಡಲಾಯಿತು.