ಪ್ರತಿನಿಧಿ ವರದಿ ಹನೂರು
ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ಯ ಇಲಾಖೆ ಹಾಗೂ ತಾಪಂ ವತಿಯಿಂದ ಈ ಸ್ವತ್ತುಗಳ ಸಮಸ್ಯೆಗಳನ್ನು ಬಗೆಹರಿಸಲು ವಸತಿ ಪ್ರದೇಶಗಳಿಗೆ ಡ್ರೋನ್ ಅಥವಾ ಯುಎವಿ ತಂತ್ರಜ್ಞಾನದ ಮೂಲಕ ಸರ್ವೇ ನಡೆಸಿ ಡ್ರೋನ್ ಮುಖಾಂತರ ನಿಮ್ಮ ಜಾಗದ ಅಳತೆಯನ್ನು ನಡೆಸಿ ನಿಮಗೆ ಪಿಆರ್ ಕಾರ್ಡ್ಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ತಾಲೂಕಿನ ಅಜ್ಜೀಪುರ ಗ್ರಾಪಂಯಲ್ಲಿ ಸ್ವಾಮಿತ್ವ ಯೋಜನೆಯ ಗ್ರಾಮ ಸಭೆಯನ್ನು ಉದ್ಘಾಟನೆ ಮಾತನಾಡಿದರು.
ಡಿಡಿಎಲ್ಆರ್ ಅಧಿಕಾರಿ ವಿದ್ಯಾರಾಣಿ ಅವರು ಮಾತನಾಡಿ, ಕಳೆದ 50 ವರ್ಷಗಳ ಹಿಂದೆ ಕಂದಾಯ ಕಟ್ಟಿರುವ ಜಮೀನುಗಳಿಗೆ ಮಾತ್ರ ಸರ್ವೆ ಮಾಡಲಾಗಿತ್ತು, ಗ್ರಾಮ ಠಾಣ ವಿಭಾಗಗಳಲ್ಲಿ ನಿಖರವಾದ ಯಾವುದೇ ದಾಖಲಾತಿಗಳು ಸಹ ಲಭ್ಯವಿರುವುದಿಲ್ಲ. ಆದ್ದರಿಂದ ಡ್ರೋನ್ ಮುಖಾಂತರ ನಿಮ್ಮ ಜಾಗ ಹಾಗೂ ಜಮೀನುಗಳನ್ನು ಸರ್ವೆ ಮಾಡಿ ಸರ್ವೆ ಇಲಾಖೆ ಗ್ರಾಪಂ ಹಾಗೂ ಜಾಗದ ಮಾಲೀಕರೊಂದಿಗೆ ಚರ್ಚೆ ಮಾಡಿ ಪಿಆರ್ ಕಾರ್ಡ್ಗಳ ಡ್ರಾಫ್ಟ್ ಗಳನ್ನು ವಿತರಿಸಲಾಗುತ್ತದೆ ಎಂದರು.
ತಹಸೀಲ್ದಾರ್ ಗುರುಪ್ರಸಾದ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಎಡಿಎಲ್ಆರ್ ನಟರಾಜು, ಸರ್ವೆ ಸೂಪರ್ವೈಸರ್ ಭಾನುರೇಖಾ, ಅಜ್ಜೀಪುರ ಗ್ರಾಪಂ ಅಬಿವೃದ್ಧಿ ಅಧಿಕಾರಿ ನಂದೀಶ್, ಅಜ್ಜೀಪುರ ಗ್ರಾಪಂ ಅಧ್ಯಕ್ಷ ರುದ್ರನಾಯಕ, ಉಪಾಧ್ಯಕ್ಷ ಪ್ರಭುಸ್ವಾಮಿ, ಸದಸ್ಯ ಚಂದ್ರ ಮುರಳಿ, ರಾಜೇಂದ್ರ, ಸೈಯದ್ ಜಬ್ಬಾರ್, ಕೃಷ್ಣಮೂರ್ತಿ, ಶಿವಮೂರ್ತಿ, ರಾಜೇಂದ್ರ, ಮಹದೇವ, ರುಕ್ಮಿಣಿ, ಗೀತಾ ಉಪಸ್ಥಿತರಿದ್ದರು.