ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಬೇಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಿ.ಎಂ.ಪೋಷನ್ ಶಕ್ತಿ ನಿರ್ಮಾಣ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಹಾಗೂ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ನಿರ್ವಹಣೆಗೆ ಪೂರಕ ಪೌಷ್ಟಿಕ ಆಹಾರ ಯೋಜನೆಯಡಿ 2024-2025 ಸಾಲಿನಲ್ಲಿ ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನಗಳ ಪೂರಕ ಪೌಷ್ಟಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಉದ್ಘಾಟಿಸಿದರು.