ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಕರೆ
ಪ್ರತಿನಿಧಿ ವರದಿ ಗುಂಡ್ಲುಪೇಟೆ
ತಾಲೂಕಿನ ರೈತರುಗಳಿಗೆ ಅನುಕೂಲವಾಗಲೆಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಖರೀದಿ ಕೇಂದ್ರ ತೆರೆಯಲಾಗಿದ್ದು, ಇಲ್ಲಿ ಪ್ರಸಕ್ತ ಸಾಲಿನ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಗುಣಮಟ್ಟದ ಸೂರ್ಯಕಾಂತಿ ಖರೀದಿ ಪ್ರತಿ ಎಕರೆ 3 ಕ್ವಿಂಟಾಲ್ ಅಂತ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಖರೀದಿ ಮಾಡಲಾಗುತ್ತದೆ. ರೈತರು ಇದರ ಸದುಪಯೋಗ ಪಡಿಸಿಕೊಳ್ಳಲು ಮುಂದಾಗ ಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಕರೆ ನೀಡಿದರು.
ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಲಯ, ಚಾ.ನಗರ ಜಿಲ್ಲೆ ಕೃಷಿ ಮಾರಾಟ ಇಲಾಖೆ, ಕೃಷಿ ತೋಟಗಾರಿಕೆ ಮತ್ತು ಸಹಕಾರ ಇಲಾಖೆಯವರ ಸಹಯೋಗದಲ್ಲಿ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿನಿಯಮಿತ (KOF) ಬೆಂಗಳೂರು ಇವರಿಂದ ನೂತನವಾಗಿ ತೆರೆದಿರುವ ಸೂರ್ಯಕಾಂತಿ ಬೆಳೆಯ ಖರೀದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷ ಬಸವರಾಜು, ನಾಗರಾಜು, ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರು ಹಾಜರಿದ್ದರು.