ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪಡೆ ಇಂದು ಪ್ರತಿಭಟನೆ ನಡೆಸಿದೆ. ಮೈಸೂರು ಬಿಜೆಪಿ ಕಚೇರಿಯಿಂದ ಜಿಲ್ಲಾ ಪಂಚಾಯತಿ ಕಚೇರಿಯತ್ತ ಹೊರಟಿದ್ದ ಪ್ರತಿಭಟನಾ ಮೆರವಣಿಗೆಯನ್ನ ತಡೆದ ಪೋಲಿಸರು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನ ವಶಕ್ಕೆ ಪಡೆದಿದ್ದಾರೆ.
ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಜಿಲ್ಲಾ ಪಂಚಾಯಿತಿಗೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ಮುಖಂಡರು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿಯತ್ತ ಹೊರಟಿದ್ದ ಬಿಜೆಪಿ ಪ್ರತಿಭಟನಾ ಮೆರವಣಿಗೆಯನ್ನ ಮಾರ್ಗ ಮಧ್ಯೆಯೇ ತಡೆ ಹಿಡಿದು, ಪೋಲೀಸರು ಕೇಸರಿ ಪಡೆಯನ್ನ ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಪಂಚಾಯಿತಿಗೆ ಮುತ್ತಿಗೆ ಹಾಕುವ ಬಿಜೆಪಿಯ ಯತ್ನ ಈ ಮೂಲಕ ವಿಫಲವಾಗಿದೆ.
ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಲ್ ನಾಗೇಂದ್ರ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರನ್ನ ಬಂಧಿಸಿರುವ ಪೋಲಿಸರು, ಪ್ರತಿಭಟನಾಕಾರರನ್ನು ಪೊಲೀಸ್ ವಾಹನ, ಸಾರಿಗೆ ಬಸ್ ನಲ್ಲಿ ಕರೆದೊಯ್ದಿದ್ದಾರೆ.