ಮೈಸೂರು: ನಾಡಹಬ್ಬ ದಸರಾ ಸಂದರ್ಭದಲ್ಲಿ ಪ್ರತಿ ವರ್ಷವೂ ಕೂಡ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ನೀಡುತ್ತಾ ಬರುತ್ತಿದೆ ಅದೇ ರೀತಿ ಈ ಬಾರಿಯೂ ಕೂಡ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಈ ಪ್ರಶಸ್ತಿಯನ್ನು ಸರ್ಕಾರವು ತನ್ನನ್ನು ತಾನೇ ಗೌರವಿಸಿಕೊಂಡಂತೆ ಸೂಚಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಅರಮನೆ ಆವರಣದಲ್ಲಿ ನಾಡಹಬ್ಬ ದಸರಾ ಪ್ರಯುಕ್ತ ಆಯೋಜಿಸಿದ್ದ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾಂ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ಬಾರಿ ಅತ್ಯಂತ ಸುಂದರವಾದ ದಸರಾ ಕಾರ್ಯಕ್ರಮಗಳನ್ನು ಆಯೋಜಿಸಿ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಲಾಗಿದೆ. ವರ್ಣ ರಂಜಿತವಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಚಾಲನೆ ದೊರಕಿದೆ .ಈ ದಿನ ಹಿರಿಯ ಸಾಹಿತಿಗಳಾದ ನಾಡೋಜ ಡಾಕ್ಟರ್ ಹಂಪಾ ನಾಗರಾಜಯ್ಯ ಅವರಿಂದ ದಸರಾ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಲಾಯಿತು ಮತ್ತು ಅರಮನೆ ವೇದಿಕೆಯಲ್ಲಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ರಾಜ್ಯ ಸಂಗೀತ ವಿದ್ವಾಂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅತ್ಯಂತ ಸಂತೋಷದಿಂದ ದಸರಾ ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡಿದ್ದೇನೆ ಎಂದು ಘೋಷಣೆ ಮಾಡಿದರು.
ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪಂಡಿತ್ ಬಸವರಾಜ ಭಜಂತ್ರಿ ಅವರಿಗೆ ಸರ್ಕಾರವೂ ನೀಡಿದೆ. ಪ್ರತಿ ಬಾರಿ ದಸರಾ ಆಚರಣೆ ಮಾಡುವ ಸಂದರ್ಭದಲ್ಲಿ ಸಂಗೀತ ಕ್ಷೇತ್ರದಲ್ಲಿ ಅಪಾರ ಸಾಧನೆಗೈದ ಸಾಧಕರನ್ನು ಗುರುತಿಸಿ ನೀಡಲಾಗುವುದು ಅದೇ ರೀತಿ ಶಹನಾಯಿ ಸಂಗೀತ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚಿನ ಸಾಧನೆಗೈದವರು ಪಂಡಿತ್ ಬಸವರಾಜ್ ಭಜಂತ್ರಿ ಅವರು. ಇವರು ದೇಶ ವಿದೇಶಗಳಲ್ಲಿ ತಮ್ಮ ಶಹನಾಯಿ ಸಂಗೀತದಿಂದ ಪ್ರಖ್ಯಾತಿಯನ್ನು ಪಡೆದಿದ್ದಾರೆ ಹಾಗೂ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವನ್ನು ನೀಡುತ್ತಿರುವ ಪಂಡಿತ್ ಬಸವರಾಜ ಭಜಂತ್ರಿ ಅವರನ್ನು ಗುರುತಿಸಿ ಸರ್ಕಾರವು ಈ ವರ್ಷದ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ನೀಡಿದೆ ಎಂದು ತಿಳಿಸಿದರು.
ಖ್ಯಾತ ಶಹನಾಯಿ ಕಲಾವಿದರು ಮತ್ತು ಸಂಗೀತ ವಿದ್ವಾನ್ ಪ್ರಶಸ್ತಿ ಪುರಸ್ಕೃತರಾದ ಪಂಡಿತ್ ಬಸವರಾಜು ಭಜಂತ್ರಿ ಅವರು ಮಾತನಾಡಿ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಸಾಮಾನ್ಯ ವ್ಯಕ್ತಿಗಳನ್ನು ಅವರ ಸಾಧನೆಗಳನ್ನು ಗುರುತಿಸಿ ಸರ್ಕಾರವು ಗೌರವ ಸೂಚಿಸುತ್ತಿರುವುದು ಪ್ರತಿಯೊಬ್ಬ ಕಲಾವಿದರು ಸಂತೋಷ ಪಡುವ ವಿಷಯ. ನಮ್ಮ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರ್ಕಾರದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಇನ್ನಿತರರಿಗೆ ಧನ್ಯವಾದಗಳು, ಈ ಹಿಂದೆ ವಿವಿಧ ಕಲಾವಿದರುಗಳು ಪ್ರಶಸ್ತಿಗಳಿಗೆ ಅರ್ಜಿಯನ್ನು ನೀಡಿದರು ಆದರೆ ನಾನು ಯಾವುದೇ ಅರ್ಜಿಯನ್ನು ನೀಡಿರಲಿಲ್ಲ ಸಿದ್ದರಾಮಯ್ಯನವರು ನನ್ನ ಕಲೆಯನ್ನು ಗುರುತಿಸಿ ಈ ದಿನ ಪ್ರಶಸ್ತಿ ಪ್ರಧಾನವನ್ನು ಮಾಡಿರುವುದು ನನಗೆ ತುಂಬಾ ಸಂತೋಷವನ್ನು ತಂದುಕೊಟ್ಟಿದೆ ಎಂದು ತಿಳಿಸಿದರು.
ಉದ್ಘಾಟನಾ ಕಾರ್ಯಕ್ರಮದ ನಂತರ ನಮಸ್ತೆ ಇಂಡಿಯಾ ನಾಟ್ಯ ರೂಪಕ ಕಾರ್ಯಕ್ರಮವನ್ನು ಹೆಸರಾಂತ ನಾಟ್ಯ ಲಕ್ಷ್ಮಣ್ ಅವರು ನಡೆಸಿಕೊಟ್ಟರು, ಹಾಗೂ ಖ್ಯಾತ ಗಾಯಕರಾದ ಅನುರಾಧ ಭಟ್, ಸುಚೇತ್ ರಂಗಸ್ವಾಮಿ ಮತ್ತು ತಂಡದವರು ನಡೆಸಿದ ಭಕ್ತಿ ಭಾವ ಗಣ ಸುಧಾ ಕಾರ್ಯಕ್ರಮವು ಅರಮನೆ ಆವರಣದಲ್ಲಿ ಪಾಲ್ಗೊಂಡಿದ್ದ ಜನರ ಮನ ಸೆಳೆಯಿತು, ಭಕ್ತಿ ಭಾವ ಗೀತೆಗಳಿಂದ ಅರಮನೆ ಆವರಣದಲ್ಲಿ ನೆರೆದಿದ್ದ ಪ್ರವಾಸಿಗರು ಸಂತಸ ಪಟ್ಟರು.
ಕಾರ್ಯಕ್ರಮಕ್ಕೂ ಮುನ್ನ ಮಹದೇವಪ್ಪ ಮತ್ತು ಮಲ್ಲೇಶಯ್ಯ ತಂಡದಿಂದ ನಂದಿ ಧ್ವಜ ಕುಣಿತ, ಸಿದ್ದಾರ್ಥ ಮತ್ತು ತಂಡದಿಂದ ವೀರಗಾಸೆ ಪ್ರದರ್ಶನ, ಗುರು ರಾಜ್ ಮತ್ತು ತಂಡದಿಂದ ಮಂಗಳವಾದ್ಯ, ಹಾಗೂ ಮೈಸೂರು ಸಂಸ್ಥಾನದ ಮಹಾನ್ ವ್ಯಕ್ತಿಯಾದ ನಾಲ್ವಡಿ ಕೃಷ್ಣರಾಜ ಅವರು ಮೈಸೂರು ಸಂಸ್ಥಾನದ ಅಭಿವೃದ್ಧಿಗೆ ಕೈಗೊಂಡ ಹಲವಾರು ಕಾರ್ಯಕ್ರಮಗಳ ಕುರಿತು ವಿವಿಧ ಭಾವಗೀತೆಗಳ ಮೂಲಕ ಅರಮನೆ ಅಂಗಳದಲ್ಲಿ ನೆರೆದಿದ್ದ ವಿವಿಧ ರಾಜ್ಯ ಹಾಗೂ ದೇಶದ ಜನತೆಗೆ ತಿಳಿಸಿ ಕೊಡುವ ಪ್ರಯತ್ನವನ್ನು ಸಿದ್ದರಾಜು ಮತ್ತು ಗೀತಾ ಗಾಯಕರ ತಂಡವು ಮಾಡಿತು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ, ಸಚಿವ ತಂಗಡಗಿ ಶಿವರಾಜ್ ಸಂಗಪ್ಪ, ಶಾಸಕ ಟಿ ಎಸ್ ಶ್ರೀವತ್ಸ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್, ಶಾಸಕರಾದ ಡಿ. ರವಿಶಂಕರ್, ಕೃಷ್ಣಮೂರ್ತಿ ಹಾಗೂ ವಿಧಾನಪರಿಷತ್ ಶಾಸಕ ಡಾ. ತಿಮ್ಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಧರಣಿ ದೇವಿ ಮಾಲಗತ್ತಿ, ಜಿಲ್ಲಾಧಿಕಾರಿ ಜಿ ಲಕ್ಷ್ಮಿ ಕಾಂತ ರೆಡ್ಡಿ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಾಯಿತ್ರಿ ಕೆ ಎಂ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.