ಯುವ ದಸರಾ ವೀಕ್ಷಣೆಗೆ ಪ್ರತಿನಿತ್ಯ ಸುಮಾರು 50 ರಿಂದ 70 ಸಾವಿರ ಜನರು ಸೇರುವ ನಿರೀಕ್ಷೆಯಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದೇವೆ ಎಂದು SP ವಿಷ್ಣುವರ್ಧನ್ ಹೇಳಿದ್ದಾರೆ. ಯುವದಸರಾ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಮೈಸೂರು ಜಿಲ್ಲೆ ಹಾಗೂ ಹೊರ ಜಿಲ್ಲೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ.
4 ಎಸ್ ಪಿ., 12 ಡಿ ಎಸ್ ಪಿ., 37 ಸಿಪಿಐ, 76 ಪಿ ಎಸ್ ಐ., 110 ಎ ಎಸ್ ಐ., 600 ಪೊಲೀಸರು, 100 ಮಹಿಳಾ ಪೊಲೀಸ್ ಸಿಬ್ಬಂದಿ, 300 ಹೋಂ ಗಾರ್ಡ್ ಗಳು ಸೇರಿದಂತೆ 1239 ಮಂದಿ ಬಂದೋಬಸ್ತ್ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ ಎಂದರು.
ಇದರ ಜೊತೆಗೆ 6 ಕೆ ಎಸ್ ಆರ್ ಪಿ, 10 ಡಿ ಎ ಆರ್., 10 ಎ ಎಸ್ ಸಿ, 4 ಕ್ಯು ಆರ್ ಟಿ, 2 ಆಂಬ್ಯುಲೆನ್ಸ್, 2 ಅಗ್ನಿಶಾಮಕ ದಳದ ವಾಹನ, 1 ಒಂದು ಮೊಬೈಲ್ ಕಮಾಂಡೋ ವಾಹನ ನಿಯೋಜನೆಗೊಂಡಿದ್ದು,ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವನ್ಯಜೀವಿ ಹಾವಳಿ ತಡೆಯಲು ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಕಾರ್ಯಕ್ರಮ ವೀಕ್ಷಣೆಗೆ ಆಗಮಿಸುವ ವಿವಿಐಪಿ, ಗಣ್ಯರು ಹಾಗು ಸಾರ್ವಜನಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದರು.
ಯುವದಸರಾ ಕಾರ್ಯಕ್ರಮದ ವಿವರ:-
ಅ. 6ರಂದು ಬಾಲಿವುಡ್ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್ ಮತ್ತು ತಂಡದಿಂದ ಸಂಗೀತ ಮನರಂಜನೆ ಕಾರ್ಯಕ್ರಮ.
ಅ. 7ರಂದು ಸಂಗೀತ ನಿರ್ದೇಶಕ ರವಿ ಬಸ್ರೂರ್ ಮತ್ತು ತಂಡದವರಿಂದ ಸಂಗೀತ ಮನರಂಜನೆ ಕಾರ್ಯಕ್ರಮ.
ಅ. 8ರಂದು ಬಾಲಿವುಡ್ ಖ್ಯಾತಿಯ ರ್ಯಾಪರ್ ಬಾದ್ ಷಾ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ.
ಅ. 9ರಂದು ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ.
ಅ. 10ರಂದು ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಮತ್ತು ತಂಡದವರಿಂದ ಸಂಗೀತ ಮನರಂಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.