ಮುಂಬೈ: ಖ್ಯಾತ ಉದ್ಯಮಿ ರತನ್ ಟಾಟಾ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಮುಂಬೈ ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ . ರಕ್ತದೊತ್ತಡ ಕಡಿಮೆಯಾದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರತನ್ ಟಾಟಾ ಅವರನ್ನು ಮುಂಜಾನೆ 12.30 ರಿಂದ 1.00 ರ ನಡುವೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಖ್ಯಾತ ಹೃದ್ರೋಗ ತಜ್ಞ ಡಾ.ಶಾರುಖ್ ಆಸ್ಪಿ ಗೋಲ್ವಾಲಾ ನೇತೃತ್ವದ ತಜ್ಞರ ತಂಡವು ಉದ್ಯಮಿ ರತನ್ ಟಾಟಾ ಅವರ ಆರೋಗ್ಯ ವಿಚಾರಣೆ ನಡೆಸುತ್ತಿದ್ದಾರ ಎನ್ನಲಾಗಿದೆ.