ಪ್ರತಿನಿಧಿ ವರದಿ ಯಳಂದೂರು
ಜಾನುವಾರಗಳನ್ನು ಅರಣ್ಯಕ್ಕೆ ಬಿಡುವಂತೆ ಒತ್ತಾಯಿಸಿ ಅರಣ್ಯ ಇಲಾಖೆ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಂಭಾಗ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಅರಣ್ಯ ಇಲಾಖೆ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ಅರಣ್ಯಕ್ಕೆ ಜಾನುವಾರುಗಳನ್ನು ಬಿಡುವಂತೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಗೌಡಳ್ಳಿ ಗ್ರಾಪಂ ವ್ಯಾಪ್ತಿಯ ದೇವರಹಳ್ಳಿ, ಟಿ ಹೊಸೂರು,ಶಿವಕಳ್ಳಿ ಹಾಗೂ ಸುತ್ತಮುತ್ತಲ ಗ್ರಾಮೀಣ ಭಾಗದಿಂದ ಕಾಡಿಗೆ ಮೇವು ಅರಸಿ ಬರುವ ಜಾನುವಾರುಗಳನ್ನು ಅರಣ್ಯಕ್ಕೆ ಬಿಡದಂತೆ ಅರಣ್ಯ ಇಲಾಖೆ ಸಿಬ್ಬಂದಿ ಅವರು ತೊಂದರೆ ಕೊಡುತ್ತಿದ್ದು, ರೈತರ ಮೇಲೆ ಅಲ್ಲೇ ಮಾಡಲು ಬರುತ್ತಾರೆ. ಹಾಗಾಗಿ ಅಧಿಕಾರಿಗಳು ಜಾನುವಾರುಗಳಿಗೆ ಯಾವುದೇ ತೊಂದರೆ ನೀಡದೆ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಅರಣ್ಯ ಅಧಿಕಾರಿಗಳು ರೈತರ ಮೇಲೆ ದಬ್ಬಾಳಿಕೆ ನಡೆಸಿ ತೊಂದರೆ ನೀಡಿದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸ್ಥಳಕ್ಕೆ ಆಗಮಿಸಿದ ಆರ್.ಎಫ್.ಓ ನಾಗೇಂದ್ರ ನಾಯಕ್ ಮಾತನಾಡಿ, ಮುಂದೆ ಈ ರೀತಿ ಯಾವುದೇ ರೀತಿಯ ಅಹಿತಕರ ಘಟನೆಗಳು ಹಾಗೂ ರೈತರಿಗೆ ತೊಂದರೆಯಾಗದಂತೆ ನಮ್ಮ ಇಲಾಖೆಯಿಂದ ಯಾವುದೇ ಸಮಸ್ಯೆ ಉಂಟಾಗದಂತೆ ಸಹಕರಿಸುತ್ತೇವೆ ಎಂದು ಭರವಸೆ ನೀಡಿದರು.
ಪಿಎಸ್ಐ ಹನಮಂತ ಉಪ್ಪಾರ್, ಸಿದ್ದಲಿಂಗಸ್ವಾಮಿ, ಶಾಂತರಾಜು, ಸಿದ್ದಲಿಂಗ, ಸ್ವಾಮಿ ಗೌಡ, ರಾಜಪ್ಪ, ನಾಗೇಂದ್ರ, ಬಸವಣ್ಣ ಹಾಗೂ ಹಾಜರಿದ್ದರು.