ಬೆಂಗಳೂರು: ಡಿ ಬಾಸ್ ಗ್ಯಾಂಗ್ ನ ಪ್ರಮುಖ ಆರೋಪಿ A14 ಪ್ರದೂಷ್ ನನ್ನು ಬೆಳಗಾವಿ ಜೈಲಿನಿಂದ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಪೀಠದಿಂದ ಆದೇಶ ನೀಡಲಾಗಿದ್ದು , ಈ ಹಿಂದೆ ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಲು 24 ACMM ಕೋರ್ಟ್ ಆದೇಶ ನೀಡಿತ್ತು. ಇದನ್ನ ಪ್ರಶ್ನಿಸಿ ಆರೋಪಿ ಪ್ರದೂಷ್ ಕೋರ್ಟ್ ನ ಮೆಟ್ಟಿಲೇರಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಂಗ ಇದೀಗ ಪ್ರದೂಷ್ ನ್ನು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸುವಂತೆ ಆದೇಶ ನೀಡಿದೆ.
ಪರಪ್ಪನ ಅಗ್ರಹಾರ ಜೈಲಲ್ಲಿ ಐಷಾರಾಮಿ ಜೀವನ ನಡೆಸಿದ್ದ ನಟ ದರ್ಶನ್ ಇದ್ದ ಫೋಟೋ ವೈರಲ್ ಆಗಿತ್ತು. ಆದರೆ ಫೋಟೋದಲ್ಲಿ ಪ್ರದೂಷ್ ಕಾಣಿಸಿರಲಿಲ್ಲ. ಈ ಬಗ್ಗೆ ಮರು ವಿಚಾರಣೆ ನಡೆಸಿದ ಕೋರ್ಟ್ ಪ್ರದೂಷ್ ರನ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡೋಕೆ ಆದೇಶ ನೀಡಿದೆ. ಪ್ರದೂಷ್ , ರೇಣುಕಾಸ್ವಾಮಿ ಕೊಲೆ ಕೇಸ್ ನ ಪ್ರಮುಖ ಆರೋಪಿಯಾಗಿದ್ದು, ಕೇಸ್ ಮುಚ್ಚಿ ಹಾಕೋಕೆ ದರ್ಶನ್ ರಿಂದ ಹಣ ಪಡೆದು ಆರೋಪಿಗಳಿಗೆ ನೀಡಿದ್ದ ಆರೋಪ ಎದುರಿಸುತ್ತಿದ್ದಾರೆ. ಮತ್ತೊಂದೆಡೆ , ದರ್ಶನ್ ಕೂಡ ಬಳ್ಳಾರಿ ಜೈಲಿನಿಂದ ಅನಾರೋಗ್ಯದ ನೆಪವೊಡ್ಡಿ ಬೆಂಗಳೂರು ಜೈಲಿಗೆ ಶಿಫ್ಟ್ ಆಗೋಕೆ ಪ್ರಯತ್ನ ಮಾಡ್ತಿದ್ದಾರೆ. ಡಿ ಬಾಸ್ ಶಿಫ್ಟ್ ಆಗ್ತಾರಾ ಇಲ್ಲ ಜಾಮೀನಿನ ಮೇಲೆ ಹೊರಬರ್ತಾರ ಅನ್ನೋ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಿದೆ.