ಮೈಸೂರು: ಜಾತಿಜನಗಣತಿ ಒಡೆದು ಆಳುವ ನೀತಿಯಾಗಿದ್ದು, ಹಿಂದೆ ಬ್ರಿಟಿಷರು ಮಾಡಿದ ಕೆಲಸವನ್ನು ಇಂದು ಇವರು ಮಾಡುತ್ತಿದ್ದಾರೆ. ರಾಜ್ಯದ ಬಹು ಸಂಖ್ಯಾತರು ಜಾತಿಗಣತಿ ವರದಿಯನ್ನು ವಿರೋಧ ಮಾಡಿದ್ದಾರೆ. ಬಹುಸಂಖ್ಯಾತರಿಗೆ ಅಪಮಾನ ಮಾಡಲು, ಜಾತಿ ಜಾತಿ ನಡುವೆ ಬೆಂಕಿ ಹಚ್ಚಲು, ಬಹು ಸಂಖ್ಯಾತರನ್ನು ಒಡೆದು ಹಾಕಲು ಯೋಚನೆ ಮಾಡುತ್ತಿದ್ದಾರೆ. ಇದನ್ನು ನಾವು ಒಪ್ಪಲು ಸಾಧ್ಯವಿಲ್ಲ. ಹಾಗೊಮ್ಮೆ ಇದು ಜಾರಿಯಾದರೆ ಸಿದ್ದರಾಮಯ್ಯರಿಗೇ ತಿರುಗುಬಾಣವಾಗುತ್ತದೆ ಎಂದು ಮೈಸೂರಿನಲ್ಲಿಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಜಾತಿ ಜನಗಣತಿ ಬಗ್ಗೆ ವಿರೋಧಪಡಿಸಿದ್ದಾರೆ.
ಇನ್ನು ದುಷ್ಟ ಶಕ್ತಿಗಳ ಎದುರು ಸತ್ಯದ ಜಯ ಎಂಬ ಪತ್ರಿಕಾ ಜಾಹಿರಾತು ವಿಚಾರವಾಗಿ ಮಾತನಾಡಿ, ದುಷ್ಟ ಶಕ್ತಿಗಳು ಯಾರು ಎಂಬುದನ್ನು ಸರ್ಕಾರ ತೀರ್ಮಾನ ಮಾಡಲ್ಲ, ಜನರು ತೀರ್ಮಾನ ಮಾಡುತ್ತಾರೆ.
ಯಾರು ಸರ್ಕಾರದ ಹಣ, ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ. ಯಾರು ಭಷ್ಟಾಚಾರವನ್ನೇ ಉದ್ಯಮ ಮಾಡಿಕೊಂಡಿದ್ದಾರೆ. ವರ್ಗಾವಣೆಗೂ ದುಡ್ಡು, ಕೆಲಸ ಕೊಡಿಸಲಿಕ್ಕೂ ದುಡ್ಡು. ಎಲ್ಲರದಲ್ಲೂ ದುಡ್ಡು ತಗೋಳ್ತಾರೆ, ಅಂತವರು ಯಾವ ದೃಷ್ಟರ ಬಗ್ಗೆ ಮಾತನಾಡುತ್ತಾರೆ ಅವರಿಗೆ ಅವರೇ ಪ್ರಶ್ನೆ ಹಾಕಿಕೊಳ್ಳಬೇಕು. ಇಂತಹ ಜಾಹೀರಾತಿಗೆ ಸರ್ಕಾರದ ಹಣ ಬಳಕೆ ಮಾಡಿಕೊಂಡು ಅವರ ಮುಖಕ್ಕೆ ಅವರೇ ಮಸಿ ಬಳೆದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.
ಮೈಸೂರಿನ ಮುಡಾ ಹಗರಣದಲ್ಲಿ ಸ್ವತಃ ಸಿಎಂ ಧರ್ಮಪತ್ನಿ ಸೈಟ್ ವಾಪಸ್ ಮಾಡಿದರು. ಯಾಕೆ ವಾಪಸ್ ಮಾಡಿದ್ರು, ತಪ್ಪು ಮಾಡಿದ್ರಿ ಅದಕ್ಕೆ ವಾಪಾಸ್ ನೀಡಿದ್ರಿ ಎಂದರು. ವಾಲ್ಮೀಕಿ ನಿಗಮದಲ್ಲಿ ಹಗರಣ ಆಗಿರೋದರ ಬಗ್ಗೆ ಇಡಿ ವರದಿ ನೀಡಿದೆ. ಪರಿಶಿಷ್ಟ ಪಂಗಡದ ಹಣವನ್ನು ಆಂಧ್ರ ಪ್ರದೇಶ, ಬಳ್ಳಾರಿ ಚುನಾವಣೆಗೆ ನೀಡಿರುವುದರ ಬಗ್ಗೆ ವರದಿ ನೀಡಿದೆ. ಯಾರು ಸರ್ಕಾರವನ್ನು ಲೂಟಿ ಮಾಡುತ್ತಿದ್ದಾರೆ.
ಅಂತಹವರಿಗೆ ಸರ್ಕಾರದ ಇರಲಿಕ್ಕೆ ಅಧಿಕಾರ. ನೀವೇನು ಬೇಕಿದ್ರು ಜಾಹಿರಾತು ನೀಡಬಹುದು. ಏನು ಬೇಕಾದರೂ ಭಾಷಣ ಮಾಡಬಹುದು ಸರ್ಕಾರ ನಿಮ್ಮ ಕೈಲಿದೆ. ಯಾರು ದುಷ್ಟರು ಯಾರು ಶಿಷ್ಟರು ಎಂಬುದನ್ನು ಜನರು ಗಮನಿಸುತ್ತಿದ್ದಾರೆ ಎಂದರು.
ಚುನಾವಣೆ ಆಯೋಗಕ್ಕೆ ದೂರು ನೀಡುವ ವಿಚಾರವಾಗಿ ಮಾತನಾಡಿದ ಅವರು, ಈಗ ತನಿಖೆ ನಡೆಯುತ್ತಿದೆ. ಈಗಾಗಲೇ ಇದರ ಬಗ್ಗೆ ದೂರು ನೀಡಿದ್ದೇವೆ. ಎಲ್ಲಾ ತನಿಖೆಗಳ ಬಳಿಕ ಸತ್ಯ ಹೊರ ಬರುತ್ತದೆ ಎಂದು ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.